ಹಿಜಾಬ್ ವಿವಾದದ ನಡುವೆ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರ ಬಂಧನ, ಕೆಲವರು ಪರಾರಿ

ಕುಂದಾಪುರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕುಂದಾಪುರ ಜೂನಿಯರ್ ಕಾಲೇಜ್ ಪರಿಸರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ನಾಲ್ವರು ಪರಾರಿಯಾಗಿದ್ದಾರೆ.
ಗಂಗೊಳ್ಳಿಯ ಹಾಜಿ ಅಬ್ದುಲ್ ಮಜೀದ್ (32) ಹಾಗು ರಜಬ್ (41) ಎಂಬವರು ಬಂಧಿತರಾಗಿದ್ದು, ಇತರ ನಾಲ್ವರು ಪರಾರಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಗಳ ಕೈಯಿಂದ ಪೊಲೀಸರು ಚಾಕು ವಶಪಡಿಸಿಕೊಂಡಿದ್ದು, ಹೋರಾಟದ ವೇಳೆ ಅಹಿತಕರ ಘಟನೆಗೆ ಪ್ಲಾನ್ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸರು ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.
ಆಪಾದಿತ ಹಾಜಿ ಅಬ್ದುಲ್ ಮಜೀದ್ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿದ್ದು ಅಲ್ಲದೇ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ. ಆಪಾದಿತ ರಜಬ್‌‌ನ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವಿದೆ ಎಂದು ಹೇಳಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement