ವಜಾಗೊಂಡಿದ್ದ ಸಾರಿಗೆ ಸಂಸ್ಥೆ ಚಾಲಕರು- ನಿರ್ವಾಹಕರ ಮರು ನೇಮಕ: ಸಚಿವ ಶ್ರೀರಾಮುಲು

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ಕೆಲಸದಿಂದ ವಜಾ ಮಾಡಲಾಗಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಂದು, ಗುರುವಾರ 100 ನೌಕರರು, ನಾಳೆ 200 ನೌಕರರ ಮರು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರ ನಡೆಸಿದ್ದ ನೌಕರರಲ್ಲಿ ಈಗಾಗಲೇ 1500 ಜನರನ್ನು ಅಮಾನತುಗೊಂಡವರನ್ನು ಈಗ ಹಿಂಪಡೆಯಲಾಗಿದೆ. 1353 ಜನರು ವಜಾಗೊಂಡಿದ್ದಾರೆ, ವಜಾಗೊಂಡವರನ್ನು ವಾಪಸ್ ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ಮಾನವೀಯತೆಯ ದೃಷ್ಟಿಯಿಂದ. ಮರು ನೇಮಕ ಆದೇಶ ನೀಡಲಾಗುತ್ತಿದೆ, ಮೊದಲ ಹಂತದಲ್ಲಿ 100 ಜನರಿಗೆ ನೇಮಕ ಮಾಡಲಾಗುತ್ತಿದೆ ಉಳಿದವರಿಗೆ ಹಂತ ಹಂತವಾಗಿ ಮರು ನೇಮಕ ಮಾಡಲಾಗುತ್ತಿದೆ. ಈ ತಿಂಗಳ ಒಳಗೆ 700 ಮಂದಿಗೆ ನೇಮಕಾತಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಸರ್ಕಾರದ ವಿರುದ್ಧ ಪ್ರತಿಭಟನೆ ಮುಷ್ಕರ ಮಾಡಿದರೆ ನಿಮ್ಮನ್ನು ರಕ್ಷಣೆ ಮಾಡುವುದು ಕಷ್ಟ. ಸರ್ಕಾರದ ಬಗ್ಗೆ ನಿಮಗೆ ಗೌರವ ಇರಬೇಕು. ಇನ್ನು ಮುಂದೆ ಪ್ರತಿ ತಿಂಗಳು ಸಂಬಳ ದೊರೆಯುವಂತೆ ನೋಡಿಕೊಳ್ಳಲಾಗುವುದು. ಈಗ ನೇಮಕಗೊಂಡವರು ಇನ್ನುಮುಂದೆ ಮುಷ್ಕರಕ್ಕೆ ಹೋಗಬಾರದು ಎಂದು ಷರತ್ತು ವಿಧಿಸಲಾಗಿದೆ. ನೌಕರರು ಮುಷ್ಕರಕ್ಕೆ ಹೋದರೆ ನೌಕರಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಮುಖ ಸುದ್ದಿ :-   ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement