ಹಿಂದೂಗಳಲ್ಲದವರಿಗೆ ದೇವಸ್ಥಾನ ನಿಷೇಧ ಕೋರಿದ್ದ ಅರ್ಜಿ ವಿಚಾರಣೆ: ಮದ್ರಾಸ್ ಹೈಕೋರ್ಟ್ ತೀಕ್ಷ್ಣ ಪ್ರತಿಕ್ರಿಯೆ

ಚಹೆನ್ನೈ: ತಮಿಳುನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶ ನೀಡದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕೆಲ ತೀಕ್ಷ್ಣ ಅವಲೋಕನಗಳನ್ನು ಮಾಡಿದೆ.
ಧರ್ಮದ ಆಧಾರದಲ್ಲಿ ದೇಶ ಒಡೆಯುವ ಯತ್ನಗಳು ನಡೆಯುತ್ತಿವೆ ಎಂಬುದನ್ನು ಇತ್ತೀಚಿನ ಘಟನೆಗಳು ತೋರಿಸುತ್ತಿವೆ ಎಂದು ಮುಖ್ಯ ನ್ಯಾಯಮೂರ್ತಿ ಎಂ. ಎನ್. ಭಂಡಾರಿ ಮತ್ತು ನ್ಯಾ. ಪಿ ಡಿ ಆದಿಕೇಶವಲು ಅವರಿದ್ದ ಪೀಠ ಟೀಕಿಸಿತು.
ನಾವು ಒಂದೇ ದೇಶವೇ ಅಥವಾ ಧರ್ಮದಿಂದ ವಿಭಜನೆಗೊಂಡಿದ್ದೇವೆಯೇ? ನಾವು ಯಾವ ಸಂದೇಶ ರವಾನಿಸುತ್ತಿದ್ದೇವೆ?… ವಸ್ತ್ರ ಸಂಹಿತೆ ಇತ್ಯಾದಿಗಳನ್ನು ಕುರಿತ ದೇವಾಲಯಗಳ ಹೊರಗಿನ ಫಲಕಗಳಿಗೆ ಹೇಗೆ ಸಾಮಾನ್ಯ ನಿರ್ದೇಶನ ನೀಡಬಹುದು? ದೇಶವನ್ನು ಧರ್ಮದಿಂದ ವಿಭಜಿಸುವ ಯತ್ನವನ್ನು ಇತ್ತೀಚಿನ ಪ್ರಚಲಿತ ವಿದ್ಯಮಾನಗಳು ತೋರಿಸುತ್ತವೆ” ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು.
ರಾಜ್ಯದ ದೇವಾಲಯಗಳಲ್ಲಿ ನಿಯಮಗಳು ಮತ್ತು ಪದ್ಧತಿಗಳನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಪೀಠದಲ್ಲಿ ನಡೆಯಿತು. ಇತರೆ ಅರ್ಜಿಗಳ ಜೊತೆಗೆ ತಮಿಳುನಾಡು ದೇವಾಲಯ ಪ್ರವೇಶ ದೃಢೀಕರಣ ಕಾಯಿದೆಯ ಪ್ರಕಾರ ಹಿಂದೂಗಳಲ್ಲದವರನ್ನು ದೇವಾಲಯ ಪ್ರವೇಶದಿಂದ ನಿರ್ಬಂಧಿಸಬೇಕು ಮತ್ತು ವಸ್ತ್ರ ಸಂಹಿತೆ ಪಾಲಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಪ್ರಕರಣವನ್ನು ಹತ್ತು ದಿನಗಳ ಕಾಲ ಮುಂದೂಡಲಾಗಿದೆ.

ಪ್ರಮುಖ ಸುದ್ದಿ :-   ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement