ಭೀಕರ ಅಪಘಾತ: ಇಬ್ಬರು ಪುಟಾಣಿಗಳು ಸೇರು ಮೂವರ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿಯಾದ ರಭಸಕ್ಕೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತರು ಎಂದು ಗುರುತಿಸಲಾಗಿದೆ.
ಶಿಕ್ಷಕ ತಾವೇ ಕಾರು ಚಾಲನೆ ಮಾಡಿಕೊಂಡು ರಾಣೆಬೆನ್ನೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸುತಗಟ್ಟಿ ಗ್ರಾಮದ ರಸ್ತೆಬದಿಯ ಜಮೀನಿನಲ್ಲಿ ಮಕ್ಕಳಾದ ಮಕ್ಕಳಾದ ಶಾಲಿನಿ ಮತ್ತು ಯಶೋದಾ ಇಬ್ಬರೂ ಆಟವಾಡುತ್ತಿದ್ದರು. ಆಗ ನಿಯಂತ್ರಣ ತಪ್ಪಿದ ಕಾರು ಮಕ್ಕಳಿಗೆ ಬಡಿದಿದೆ. ನಂತರ ಮರಕ್ಕೆ ಕಾರು ಢಿಕ್ಕಿಯಾಗಿ ಡಿಕ್ಕಿ ರಭಸಕ್ಕೆ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮಕ್ಕಳನ್ನು ಗ್ರಾಮಸ್ಥರು ತಕ್ಷಣ ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರೂ ಮಕ್ಕಳು ಬದುಕುಳಿಯಲಿಲ್ಲ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಹಂಸಭಾವಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement