ಏಕ ಮಾಲೀಕತ್ವದ ಪಹಣಿಗೆ ಭೂಪರಿವರ್ತನಾ ಪೂರ್ವ ನಕ್ಷೆಗೆ ವಿನಾಯ್ತಿ ನೀಡಿದ ಸರ್ಕಾರ

ಬೆಂಗಳೂರು: ಈಗ ಏಕ ಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂಪರಿವರ್ತನೆ ಕೋರಿ ಸಲ್ಲಿಸುವ ಅರ್ಜಿಗೆ ಪೂರ್ವ ನಕ್ಷೆಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇದುವರೆಗೆ ಭೂ ಪರಿವರ್ತನೆಗೆ ಕೋರಿ ಸಲ್ಲಿಸಲಾಗುತ್ತಿದ್ದಂತ ಎಲ್ಲಾ ಅರ್ಜಿಗಳಿಗೆ ಭೂ ಪರಿವರ್ತನಾ ಪೂರ್ವ ನಕ್ಷೆ ತಯಾರಿಸಲಾಗುತ್ತಿತ್ತು. ಈ ಕುರಿತು ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು, ಸುತ್ತೋಲೆ ಹೊರಡಿಸಿದ್ದಾರೆ.

ಭೂ ಪರಿವರ್ತನಾ ಉದ್ದೇಶಕ್ಕಾಗಿ ಸಲ್ಲಿಸಬೇಕಾದ ಭೂಪರಿವರ್ತನಾ ನಕ್ಷೆಗಳನ್ನು ಕಡ್ಡಾಯವಾಗಿ ಮೋಜಿಣಿ ತಂತ್ರಾಂಶದ ಮೂಲಕವೇ ನಿರ್ವಹಿಸಲು ಮತ್ತು ಭೂಪರಿವರ್ತನೆ ಕೋರಿ ಸಲ್ಲಿಸಲಾಗುವ ಅರ್ಜಿಗಳಿಗೆ ಭೂಪರಿವರ್ತನಾ ಪೂರ್ವ ನಕ್ಷೆ ಸಲ್ಲಿಸವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಆದರೆ ಪ್ರಸ್ತುತ ಏಕ ಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂ ಪರಿವರ್ತನೆ ಕೋರಿ ಸಲ್ಲಿಸಲಾಗುವ ಅರ್ಜಿಗಳಿಗೆ ಭೂಪರಿವರ್ತನಾ ಪೂರ್ವ ನಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಭೂಪರಿವರ್ತನಾ ತಂತ್ರಾಂಶದಲ್ಲಿಯೂ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement