ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿ ನೀಡಲಾಗಿದೆ. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಅಲ್ಲದೆ, ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ಧತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಗ್ರಾಮೀಣ ಭಾಗದಲ್ಲಿ ಜನನ ಮತ್ತು ಮರಣಗಳ ತ್ವರಿತ ನೋಂದಣಿ ಮತ್ತು ವರದಿ ಮಾಡುವುದನ್ನು ಖಚಿತ ಪಡಿಸಿಕೊಳ್ಳಲು ಮತ್ತು ಗ್ರಾಮ ಪಂಚಾಯತ ಜನರ ಎಲ್ಲ ದತ್ತಾಂಶ ಲಭ್ಯವಾಗುವಂತೆ ನೋಡಿಕೊಳ್ಳುವುದು ಗ್ರಾಮಪಂಚಾಯತ ಕಡ್ಡಾಯ ಕಾರ್ಯ ಮಾಡಿದೆ. ಹೀಗಾಗಿ ಪಿಡಿಒಗಳಿಗೆ ಜನನ, ಮರಣಗಳ ನೋಂದಣಾಧಿಕಾರಿಯಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಉಪನೋಂದಣಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ