ಶಿವಮೊಗ್ಗ: ನಗರದ ಶಾಲಾ- ಕಾಲೇಜುಗಳಿಗೆ ಮಂಗಳವಾರವೂ ರಜೆ, ಮುಂದುವರಿದ ನಿಷೇಧಾಜ್ಞೆ

ಶಿವಮೊಗ್ಗ: ಶಿವಮೊಗ್ಗ ನಗರದ ಶಾಲಾ- ಕಾಲೇಜುಗಳಿಗೆ ನಾಳೆ (ಫೆಬ್ರವರಿ 22) ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಮಂಗಳವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಫೆಬ್ರವರಿ 23 ರ ಮುಂಜಾನೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಪೊಲೀಸರ ಸರ್ಪಗಾವಲು ಸುತ್ತುವರಿದಿದೆ. ಹರ್ಷನ ಮನೆ ಸುತ್ತಮುತ್ತ ಆರ್​ಎಎಫ್​​ ಸಿಬ್ಬಂದಿ ಕಾವಲು ನಿಯೋಜನೆ ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸದಲ್ಲಿ ಪೊಲೀಸರು ಕಾವಲಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

ನಿಮ್ಮ ಕಾಮೆಂಟ್ ಬರೆಯಿರಿ

advertisement