ಶಿವಮೊಗ್ಗ: ಶಿವಮೊಗ್ಗ ನಗರದ ಶಾಲಾ- ಕಾಲೇಜುಗಳಿಗೆ ನಾಳೆ (ಫೆಬ್ರವರಿ 22) ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಮಂಗಳವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಫೆಬ್ರವರಿ 23 ರ ಮುಂಜಾನೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಪೊಲೀಸರ ಸರ್ಪಗಾವಲು ಸುತ್ತುವರಿದಿದೆ. ಹರ್ಷನ ಮನೆ ಸುತ್ತಮುತ್ತ ಆರ್ಎಎಫ್ ಸಿಬ್ಬಂದಿ ಕಾವಲು ನಿಯೋಜನೆ ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸದಲ್ಲಿ ಪೊಲೀಸರು ಕಾವಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ