ಉಕ್ರೇನ್​​ನಲ್ಲಿ ಸಿಲುಕಿರುವ ಕರ್ನಾಟಕದವರ ಮಾಹಿತಿ ಸಂಗ್ರಹಕ್ಕೆ ವೆಬ್ ಪೋರ್ಟಲ್ ಕಾರ್ಯಾರಂಭ

ಬೆಂಗಳೂರು : ಉಕ್ರೇನ್​​ನಲ್ಲಿ ಸಿಲುಕಿರುವ ಕರ್ನಾಟಕದವರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವೆಬ್ ಪೋರ್ಟಲ್​​ ಒಂದನ್ನು ಅಭಿವೃದ್ಧಿಪಡಿಸಿದೆ.
ಈ ವೆಬ್ ಪೋರ್ಟಲ್ ಮೂಲಕ ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಜನರ ಅಗತ್ಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತದೆ ಎಂದು ತಿಳಿಸಲಾಗಿದೆ. ವೆಬ್ ಪೋರ್ಟಲ್ ಯುಆರ್​ಎಲ್- http://ukraine.karnataka.tech ಅನ್ನು ನೋಡಲ್​ ಅಧಿಕಾರಿ ಮನೋಜ ರಾಜನ್​ ಮತ್ತು ತಂಡ ಕೇವಲ 12 ಗಂಟೆಯೊಳಗೆ ಈ ಪೋರ್ಟಲ್​​ ಅನ್ನು ಅಭಿವೃದ್ಧಿಪಡಿಸಿದೆ.

ಉಕ್ರೇನ್​ನಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಂಬಂಧಿಸಿದ ಕೆಲ ದಾಖಲೆ ಸಹಿತ ಮಾಹಿತಿಯನ್ನ ನೀವು ನೀಡಬೇಕು. ಅಲ್ಲಿ ಸಿಲುಕಿರುವವರ ಜೊತೆಗಿನ ಸಂಬಂಧ, ಸಿಲುಕಿರುವ ಜನರ ಬಗ್ಗೆ ತಿಳಿಸಬೇಕು. ವಿದೇಶಾಂಗ ಸಚಿವಾಲಯ ವೆಬ್‌ಸೈಟ್ ಮಾಹಿತಿ ಹಾಗೂ ಭಾರತ ಸರ್ಕಾರದಿಂದ ಸಂಗ್ರಹಿಸಿದ ಅಗತ್ಯ ಮಾಹಿತಿ ಈ ಪೋರ್ಟಲ್​ನಲ್ಲಿ ಇರಲಿದೆ. ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಉಕ್ರೇನ್​ನಲ್ಲಿನ ಭಾರತೀಯ ದೂತಾವಾಸ, ಹೆಲ್ಪ್‌ಲೈನ್ ನಂಬರ್ ಹಾಗೂ ಇ-ಮೇಲ್ ಅಡ್ರೆಸ್ ಗಳು ಇದರಲ್ಲಿ ಇರುತ್ತದೆ.. ಅಲ್ಲದೆ ಸದ್ಯದ ಸುದ್ದಿಗಳು ಕೂಡ ಇದರಲ್ಲಿ ಲಭ್ಯವಾಗುತ್ತದೆ.
ಈ ವೆಬ್ ಪೋರ್ಟಲ್ ಮೂಲಕ ಸಂಗ್ರಹಿಸಿದ ಮಾಹಿತಿಯನ್ನು ವಿದೇಶಾಂಗ ಸಚಿವಾಲಯದ ಕಂಟ್ರೋಲ್ ರೂಂಗೆ ಕಳುಹಿಸಲಾಗುತ್ತದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿದಾರನ ಜೊತೆ ಮಾತುಕತೆ ನಡೆಸಲಿದೆ. ಜೊತೆಗೆ ಸದ್ಯದ ಸ್ಥಿತಿಗತಿ, ಹೆಚ್ಚುವರಿ ಮಾಹಿತಿಯನ್ನು ಸಹ ಸಂಗ್ರಹಿಸಲಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement