ನಟ ಚೇತನ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಸಾಮಾಜಿಕ ಹೋರಾಟಗಾರ, ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಕುಮಾರ್ ಅವರಿಗೆ ಜಾಮೀನು ಲಭಿಸಿದೆ. ನಟ ಚೇತನ್ ಕುಮಾರ್ ಅವರಿಗೆ 32ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ನಟ ಚೇತನ್ ಹೈಕೋರ್ಟ್‌ ನ್ಯಾಯಮೂರ್ತಿ ಕುರಿತು ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಾರೆಂಬ ಕಾರಣಕ್ಕೆ ಅವರನ್ನು ಬಂಧಿಸಿ, 8ನೇ ಎಸಿಎಂಎಂ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿತ್ತು. ಆ ವೇಳೆ ಕೋರ್ಟ್‌ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ ಈಗ 32 ನೇ ಎಸಿಎಂಎಂ ನ್ಯಾಯಾಲಯದಿಂದ ನಟ ಚೇತನ್​ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ.

ಚೇತನ್​ಗೆ ಜಾಮೀನು ನೀಡಲು ಕೆಲ ಷರತ್ತುಗಳನ್ನು ಹಾಕಲಾಗಿದೆ. ಒಂದು ಲಕ್ಷ ರೂ. ಬಾಂಡ್ ಕೊಡಬೇಕು. ಇಬ್ಬರ ಶ್ಯೂರಿಟಿ ಬೇಕು. ಪೊಲೀಸರು ನಡೆಸುವ ತನಿಖೆಗೆ ಸಹಕರಿಸಬೇಕು ಎಂದು ಷರತ್ತಿನಲ್ಲಿದೆ. ಇತ್ತೀಚೆಗೆ ಹಿಜಾಬ್​ ವಿವಾದ ಸಾಕಷ್ಟು ಸುದ್ದಿಯಾಗಿತ್ತು. ​ಫೆಬ್ರವರಿ 16ರಂದು ಟ್ವೀಟ್​ ಮಾಡಿದ್ದ ಚೇತನ್, ಅದರಲ್ಲಿ ಹಿಜಾಬ್​ ವಿಚಾರವನ್ನು ಪ್ರಸ್ತಾಪಿಸಿದ್ದರು. ಅಲ್ಲದೆ, ಹೈಕೋರ್ಟ್​ ಜಡ್ಜ್​​ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರೆಂಬ ಕಾರಣಕ್ಕೆ ಅವರ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement