ಶಿವಮೊಗ್ಗ: ನಗರದಲ್ಲಿ ನಾಳೆಯಿಂದ (ಫೆಬ್ರವರಿ 28ರಿಂದ) ಶಾಲಾ- ಕಾಲೇಜು ಪುನಾರಂಭ ಆಗಲಿದೆ.
ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಉದ್ವಿಗ್ನಗೊಂಡ ಗಲಭೆ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕಳೆದ ಒಂದು ವಾರದಿಂದ ಬಂದ್ ಆಗಿತ್ತು. ಆದರೆ, ಈಗ ಸೋಮವಾರದಿಂದ ಶಾಲಾ ಕಾಲೇಜು ಪುನಾರಂಭ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಆದೇಶ ಮಾಡಿದ್ದಾರೆ.
ಈಗ ಪರಿಸ್ಥಿತಿ ತಿಳಿಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ