ಕೀವ್(ಉಕ್ರೇನ್): ಉಕ್ರೇನ್ನ ಖಾರ್ಕಿವ್ ನಗರದ ಮೇಲೆ ಇಂದು ಬೆಳಗ್ಗೆ ರಷ್ಯಾ ಸೇನೆ ನಡೆಸಿರುವ ವೈಮಾನಿಕ ಶೆಲ್ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮೃತಪಟ್ಟಿರುವ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿ ಖಾರ್ಕಿವ್ನಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ತಿಂಡಿ ಮಾಡಲು ಹೊರಗಡೆ ಹೋಗಿದ್ದ ವೇಳೆ ರಷ್ಯಾ ರಾಕೆಟ್ ದಾಳಿ ನಡೆಸಿದ್ದು, ಅದು ನವೀನ್ ನಿಂತಿದ್ದ ಕಟ್ಟಡಕ್ಕೆ ಬಡಿದು ಈ ದುರ್ಘಟನೆ ನಡೆದಿದೆ. ಕಾರ್ಖೀವ್ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ಎನ್ನಲಾಗಿದೆ.
ಖಾರ್ಕಿವ್ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವಿನ ವಿಚಾರವನ್ನು ಭಾರತೀಯ ವಿದೇಶಾಂಗ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.’ಉಕ್ರೇನ್ ಖಾರ್ಕಿವ್ನಲ್ಲಿ ಬೆಳಗ್ಗೆ ನಡೆದ ಶೆಲ್ ದಾಳಿಯ ವೇಳೆ ಭಾರತೀಯ ವಿದ್ಯಾರ್ಥಿವೊರ್ವ ಸಾವಿಗೀಡಾಗಿರುವುದು ಅತ್ಯಂತ ದುಃಖದ ವಿಚಾರ. ವಿದ್ಯಾರ್ಥಿಯ ಪೋಷಕರ ಜೊತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂಪರ್ಕದಲ್ಲಿದೆ’ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಗ್ಚಿ ಮಾಹಿತಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ