ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಭಾರತದ ಎರಡನೇ ವಿದ್ಯಾರ್ಥಿ ಸಾವು

ನವದೆಹಲಿ: ರಷ್ಯಾದ ಸೇನೆಯ ಆಕ್ರಮಣದ ನಂತರ ಯುದ್ಧ ನಡೆಯುತ್ತಿರುವ ಉಕ್ರೇನ್‌ನಲ್ಲಿ ಬುಧವಾರ ಪಂಜಾಬ್‌ನ ಬರ್ನಾಲಾದ ಭಾರತೀಯ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿದ್ದಾನೆ.
ಚಂದನ್ ಜಿಂದಾಲ್ (22) ಉಕ್ರೇನ್‌ನ ವಿನ್ನಿಟ್ಸಿಯಾ ನ್ಯಾಷನಲ್ ಪೈರೋಗೋವ್ ಸ್ಮಾರಕ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ.

ಲಭ್ಯವಿರುವ ವರದಿಗಳ ಪ್ರಕಾರ, ಜಿಂದಾಲ್ ಪಾರ್ಶ್ವವಾಯುವಿಗೆ ಒಳಗಾದರು. ಅವರು ಸ್ವಲ್ಪ ಸಮಯ ಆಸ್ಪತ್ರೆಯಲ್ಲಿದ್ದರು. ನಂತರ ವಿನ್ನಿಟ್ಸಿಯಾ (ಕೈವ್ಸ್ಕಾ ಸ್ಟ್ರೀಟ್ 68) ತುರ್ತು ಆಸ್ಪತ್ರೆಗೆ ದಾಖಲಾಗಿದ್ದರು. ಹಿಂದಿನ ದಿನ ಅವರು ಕೊನೆಯುಸಿರೆಳೆದರು. ಮೃತದೇಹವನ್ನು ಮರಳಿ ತರಲು ವ್ಯವಸ್ಥೆ ಮಾಡುವಂತೆ ಅವರ ತಂದೆ ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಒಂದು ದಿನದ ಹಿಂದೆ ಖಾರ್ಕಿವ್‌ನಲ್ಲಿ ಶೆಲ್ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಹಾವೇರಿಯ ವಿದ್ಯಾರ್ಥಿಯ ಶವವನ್ನು ಮರಳಿ ತರಲು ಕೇಂದ್ರವು ಪ್ರಯತ್ನಗಳನ್ನು ನಡೆಸುತ್ತಿದೆ.
ಪ್ರಯಾಣಿಕರ ಸೇವೆಗಳಿಗಾಗಿ ಉಕ್ರೇನ್‌ನಲ್ಲಿನ ವಾಯುಪ್ರದೇಶವನ್ನು ಮುಚ್ಚಿರುವುದರಿಂದ, ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ನಡೆಯುತ್ತಿರುವ ರೀತಿಯಲ್ಲೇ ಇತರ ದೇಶಗಳ ಮೂಲಕ ಮೃತದೇಹಗಳನ್ನು ಮರಳಿ ತರಬಹುದು.
ಏತನ್ಮಧ್ಯೆ, ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತನ್ನ ಎಲ್ಲಾ ನಾಗರಿಕರನ್ನು ತಕ್ಷಣವೇ ಖಾರ್ಕಿವ್‌ನಿಂದ ತೊರೆಯುವಂತೆ ತುರ್ತು ಸಲಹೆಯನ್ನು ನೀಡಿದೆ. ಎಲ್ಲರೂ ಪೆಸೊಚಿನ್, ಬಾಬೆ ಮತ್ತು ಬೆಜ್ಲ್ಯುಡೋವ್ಕಾ ವಸಾಹತುಗಳನ್ನು ತಲುಪಬೇಕು ಎಂದು ರಾಯಭಾರ ಕಚೇರಿ ತಿಳಿಸಿದೆ.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement