ಉಡುಪಿ: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಮೃತಪಟ್ಟ ಘಟನೆ ಸಂತೆಕಟ್ಟೆ ಬಳಿ ನಡೆದಿದೆ.
ಮೃತರನ್ನು ಗಣೇಶ್ ಪೈ (58)ಹಾಗೂ ಪುತ್ರಿ ಗಾಯತ್ರಿ ಪೈ (27) ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ ಬಂದಿದ್ದರು. ಮಗಳ ಜೊತೆ ಸ್ಕೂಟರ್ನಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಕರಾವಳಿ ಕಾವಲು ಪಡೆಯ ಎಎಸ್ಐ ಗಣೇಶ್ ಪೈ ಹಾಗೂ ಪುತ್ರಿ ಗಾಯತ್ರಿ ಪೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ