ಆಟೊದಲ್ಲಿ ಪ್ರಯಾಣಿಸಿದ ಪೇಜಾವರ ಶ್ರೀಗಳು…

ಉಡುಪಿ: ಕಾರ್ಯಕ್ರಮವೊಂದಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ರಿಕ್ಷಾದಲ್ಲಿ ತೆರಳಿದ ವಿದ್ಯಾಮಾನದ ಬಗ್ಗೆ ವರದಿಯಾಗಿದೆ.
ಉಡುಪಿಯ ಪ್ರಸಿದ್ಧ ಕಡಿಯಾಳಿ ದೇವಳಕ್ಕೆ ನೂತನ ಧ್ವಜಮರವನ್ನು ಹೊತ್ತು ತರುವ ಮೆರವಣಿಗೆಯಲ್ಲಿ ಭಾಗವಹಿಸಿದ ಶ್ರೀಗಳಿಗೆ ಮುಂದಿನ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವರು ಅನಂತೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೆರವಣಿಗೆಯ ಕಾರಣಕ್ಕೆ ರಸ್ತೆಯುದ್ದಕ್ಕೂ ವಾಹನಗಳು ಸಾಲು ಸಾಲು ಬರುತ್ತಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು. ಹೀಗಾಗಿ ಶ್ರೀಗಳಿಗೆ ತಮ್ಮ ವಾಹನದಲ್ಲಿ ತೆರಳಿದರೆ ತಾವು ಹೋಗಬೇಕಿರುವ ಕಾರ್ಯಕ್ರಮಕ್ಕೆ ವಿಳಂಬ ಆಗುತ್ತದೆ ಎಂದು ಮನದಟ್ಟಾಗಿದೆ. ಹೀಗಾಗಿ ಅವರು ತಮ್ಮ ವಾಹನದಲ್ಲಿ ಹೋಗದೆ ಅದೇ ದಾರಿಯಲ್ಲಿ ಬಂದ ರಿಕ್ಷಾವನ್ನು ನಿಲ್ಲಿಸಿ ತಾವು ಅದರಲ್ಲಿ ಕುಳಿತು ಒಳಮಾರ್ಗವಾಗಿ ಉಡುಪಿ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ರಥಬೀದಿಗೆ ಬಂದಿದ್ದಾರೆ.

 

5 / 5. 4

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement