ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು, ಸಕ್ರಿಯ ಪ್ರಕರಣಗಳು ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ ಪ್ರಮಾಣ 1.07%ಗೆ ಕುಸಿದಿದೆ.
ಬೆಂಗಳೂರು ನಗರದಲ್ಲಿ ಹೊಸದಾಗಿ 182 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. 2,419 ಸಕ್ರಿಯ ಪ್ರಕರಣಗಳಿವೆ. 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ..
ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement