ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 229 ಜನರಿಗೆ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಹೊಸದಾಗಿ 229 ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 264 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 3,248ಕ್ಕೆ ಇಳಿಕೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.47%ಕ್ಕೆ ಮತ್ತು ಮರಣ ಪ್ರಮಾಣ 1.31%ಗೆ ಇಳಿಕೆಯಾಗಿದೆ.
ಬೆಂಗಳೂರು ನಗರದಲ್ಲಿ ಹೊಸದಾಗಿ 146 ಕೊರೊನಾ ಸೋಂಕು ದಾಖಲಾಗಿದೆ. ಮತ್ತು ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು 2,425ಕ್ಕೆ ಇಳಿಕೆಯಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ..
ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 146, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 5, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 5, ಕೋಲಾರ 0, ಕೊಪ್ಪಳ 2, ಮಂಡ್ಯ 2, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 6, ತುಮಕೂರು 13, ಉಡುಪಿ 2, ಉತ್ತರ ಕನ್ನಡ 3, ವಿಜಯಪುರ ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement