ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್​​ಗೆ ಜೀವ ಬೆದರಿಕೆ

ಶಿವಮೊಗ್ಗ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.
ಅರುಣ್ ಅವರು ವಿಧಾನ ಪರಿಷತ್​​ನ ಮಾಜಿ ಸಭಾಪತಿ ಡಿ.ಎಸ್. ಶಂಕರಮೂರ್ತಿ ಅವರ ಮಗ. ಇವರಿಗೆ ಮುಸ್ತಾಕ್ ಅಲಿ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಅರುಣ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ ಇದು ಅನ್ಯಕೋಮಿನವರ ಕೃತ್ಯ ಎಂದು ತಿಳಿಸಿದ್ದರು.
“ನಿನ್ನೆ ಕೊಲೆಯಾದ ವ್ಯಕ್ತಿ ನಿಮ್ಮ ತಲೆಯಲ್ಲಿ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದರೆ, ಮುಂದಿನ ದಿನ ನಿಮ್ಮ ಹೆಂಡತಿ ಮಕ್ಕಳೇ ನಮ್ಮ ಟಾರ್ಗೆಟ್ ಎಂದು ಪೋಸ್ಟ್ ಮಾಡಲಾಗಿತ್ತು. .ಈ ಬಗ್ಗೆ ಅರುಣ್ ಅವರ ಆಪ್ತ ಸಹಾಯಕ ವಾಗೀಶ್ ಎಸ್​ಪಿಗೆ ದೂರು ನೀಡಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement