ಅಯೋಧ್ಯಾ ರಾಮ ಜನ್ಮಭೂಮಿಯಿಂದ ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ವಿಮಾನ-ರೈಲ್ವೆ ಸಂಪರ್ಕ: ಶಶಿಕಲಾ ಜೊಲ್ಲೆ

ಬೆಂಗಳೂರು: ಹನುಮ ಜನ್ಮಸ್ಥಳ ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯೆಯಿಂದ ವಿಮಾನಯಾನ ಹಾಗೂ ರೈಲ್ವೆ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬುಧವಾರ ಎನ್‌.ರವಿಕುಮಾರ್‌ ಪ್ರಶ್ನೆಗೆ ಉತ್ತರಿಸಿದ ಅವರು, ಹನುಮನ ಜನ್ಮಸ್ಥಳ ಅಂಜನಾದ್ರಿಯ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಮುಖ್ಯಮಂತ್ರಿಗಳು 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ. ಮುಜರಾಯಿ ಇಲಾಖೆಯ ವತಿಯಿಂದ ಫೆಬ್ರವರಿ 22 ರಂದು ದೈವ ಸಂಕಲ್ಪ ಯೋಜನೆ ಪ್ರಾರಂಭಿಸಲಾಗಿದೆ ಎಂದರು.

ಈ ಯೋಜನೆಯಡಿ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್‌ ಪ್ಲಾನ್‌ ರೂಪಿಸಲಾಗಿದೆ. ಇದರಲ್ಲಿ ಅಂಜನಾದ್ರಿ ಬೆಟ್ಟವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. 13 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ 5.50 ಕೋಟಿ ರೂಪಾಯಿಗಳ ಪ್ರಸ್ತಾವನೆ ನಮ್ಮ ಮುಂದಿದೆ. ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಹನುಮ ಜನ್ಮಸ್ಥಳ ಅಂಜನಾದ್ರಿಗೆ ಸಂಪರ್ಕ ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ವಿಮಾನಯಾನ ಹಾಗೂ ರೈಲ್ವೆ ಸಂಪರ್ಕ ನಿರ್ಮಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement