ಜಮ್ಮು-ಕಾಶ್ಮೀರದಲ್ಲಿ ಸರಪಂಚನ ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಶ್ರೀನಗರ: ಶ್ರೀನಗರದ ಹೊರವಲಯದಲ್ಲಿ ಸರಪಂಚ​​ರೊಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಮೃತರನ್ನು ಸಮೀರ್ ಭಟ್​ ಎಂದು ಗುರುತಿಸಲಾಗಿದ್ದು, ಇವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸರಪಂಚರಾಗಿದ್ದರು. ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೈಬಾದ ಅಂಗಸಂಸ್ಥೆಯಾಗಿರುವ ದಿ ರೆಸಿಸ್ಟನ್ಸ್​ ಫ್ರಂಟ್​ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಸಮೀರ್ ಭಟ್​​ ಅವರಿಗೆ ಉಗ್ರರಿಂದ ಬೆದರಿಕೆಯಿದ್ದ ಕಾರಣ ಅವರನ್ನ ಹೊಟೇಲ್​ವೊಂದರಲ್ಲಿ ಇಟ್ಟು, ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ಅನಿವಾರ್ಯ ಕೆಲಸಕ್ಕಾಗಿ ಬುಧವಾರ ಅವರು ಅಲ್ಲಿಂದ ಹೊರಬೀಳಬೇಕಾಯಿತು. ಅದೂ ಕೂಡ ತುಂಬ ಮುನ್ನೆಚ್ಚರಿಕೆಯಿಂದ, ಗೌಪ್ಯವಾಗಿಯೇ ಹೊರಬಿದ್ದಿದ್ದರು. ಆದರೂ ಕೂಡ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಖೋನ್​ಮೋಹ್​ ಎಂಬಲ್ಲಿ ಉಗ್ರರು ಅವರಿಗೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಸುತ್ತುವರಿದಿದ್ದಾರೆ. ಪರಿಶೀಲನೆ ನಡೆಸಲಾಗುತ್ತಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement