ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ.
ಮೃತರನ್ನು ನವೀನ(32), ರಾಜೇಂದ್ರ(32), ಮೋಹನ್(28) ಎಂದು ಹೇಳಲಾಗಿದೆ. ಇವರೊಂದಿಗೆ ಬಂದಿದ್ದ ಮತ್ತೊಬ್ಬ ಊಟ ತರಲು ಹೋಗಿದ್ದ ಕಾರಣಕ್ಕೆ ಬದುಕುಳಿದಿದ್ದಾನೆ ಎನ್ನಲಾಗಿದೆ.

ಕೆರೆ ಬಳಿ ಪಾರ್ಟಿ ಮಾಡಿದ ಸ್ನೇಹಿತರು ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ತೆಪ್ಪ ಮಗುಚಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ರಕ್ಷಣೆಗೆ ಮುಂದಾದರೂ ಕೆರೆಯ ಮಧ್ಯದಲ್ಲಿ ಯುವಕರು ಸಿಲುಕಿಕೊಂಡಿದ್ದ ಕಾರಣ ತಕ್ಷಣ ರಕ್ಷಣೆ ಕಾರ್ಯ ಕೈಗೊಳ್ಳಲು ಅವರಿಂದ ಸಾಧ್ಯವಾಗಿಲ್ಲ. ಮಾಹಿತಿ ತಿಳಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement