ವಿಧಾನ ಪರಿಷತ್ ಚುನಾವಣೆ: ಮೂವರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಒಂದು ಕ್ಷೇತ್ರಕ್ಕೆ ಹೆಸರು ಪ್ರಕಟಿಸದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂವರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ವಾಯವ್ಯ ಶಿಕ್ಷಕರ ಕ್ಷೇತ್ರ- ಅರುಣ್ ಶಹಾಪುರ (ಹಾಲಿ ಸದಸ್ಯ), ವಾಯವ್ಯ ಪದವೀಧರ ಕ್ಷೇತ್ರ – ಹನುಮಂತ ನಿರಾಣಿ (ಹಾಲಿ ಸದಸ್ಯ)ದಕ್ಷಿಣ ಪದವೀಧರ ಕ್ಷೇತ್ರ -ಎಂ.ವಿ.ರವಿಶಂಕರ್ ಅವರ ಹೆಸರನ್ನು ಬಿಡುಗಡೆ ಮಾಡಿದೆ.

ಗೋ.ಮಧುಸೂದನ ಅವರಿಗೆ ಈ ಬಾರಿಯೂ ಟಿಕೆಟ್ ನೀಡಿಲ್ಲ. ಬಿಜೆಪಿ ಹೈಕಮಾಂಡ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯನ್ನು ಬಿಜೆಪಿಗೆ ಕರೆತರಲು ಬಿಜೆಪಿ ನಾಯಕರು ಕಸರತ್ತು ನಡೆಯುತ್ತಿದೆ ಎನ್ನುವ ಊಹಾಪೋಹದ ಮಧ್ಯೆಯೇ ರಾಜ್ಯ ಬಿಜೆಪಿ ಮೋಹನ್ ಲಿಂಬೆಕಾಯಿ ಹೆಸರು ಕಳುಹಿಸಿದೆ ಎನ್ನಲಾಗಿದ್ದರೂ ಬಿಜೆಪಿ ಈ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಪ್ರಕಟಿಸದೆ ಹಾಗೆಯೇ ಬಿಟ್ಟಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

ನಿಮ್ಮ ಕಾಮೆಂಟ್ ಬರೆಯಿರಿ

advertisement