ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮುರೇಗಾರ ಜಲಪಾತದಲ್ಲಿ ವ್ಯಕ್ತಿಯೊಬ್ಬ ಮುಳುಗಿ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ.
ತುಮಕೂರು ಮೂಲದ ನವೀನ ಕುಮಾರ್ (35) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಕೆಲವರೊಂದಿಗೆ ಪ್ರವಾಸಕ್ಕೆ ಬಂದಿದ್ದ ನವೀನ್ ಕುಮಾರ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ತುಮಕೂರು ನಗರದ ಆರೆಸ್ಸೆಸ್ ಜವಾಬ್ದಾರಿ ಇತ್ತು ಎನ್ನಲಾಗಿದೆ. ಶಿರಸಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು ಶಿರಸಿ ಗ್ರಾಮಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ