ಉಕ್ರೇನ್ ನಲ್ಲಿ ದಾಳಿ ನಿಂತ ನಂತರ ನವೀನ್ ಮೃತದೇಹ ತರಲು ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಘರ್ಷ ಪೀಡಿತ ಉಕ್ರೇನ್ ನಲ್ಲಿ ಇನ್ನೂ ಬಾಂಬ್ ದಾಳಿ ನಿಂತಿಲ್ಲ. ಬಾಂಬ್ ದಾಳಿ ನಿಂತ ಬಳಿಕ ನವೀನ್ ಮೃತದೇಹವನ್ನು ತರುವ ಬಗ್ಗೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಬಾಂಬ್‌ ದಾಳಿ ಇನ್ನೂ ನಡೆಯುತ್ತಿದೆ; ದಾಳಿ ನಿಂತ ನಂತರ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಉಕ್ರೇನ್‌ನಲ್ಲಿ ಸಿಲುಕಿದ್ದ ಬಹುತೇಕ ಎಲ್ಲರನ್ನೂ ಏರ್‌ಲಿಫ್ಟ್ ಮಾಡಿದ್ದಾರೆ. ಸ್ಥಳಾಂತರ ಅಂತಿಮ‌ ಹಂತಕ್ಕೆ ಬಂದಿದೆ. ನವೀನ್ ದೇಹ ತರುವ ಬಗ್ಗೆಯೂ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದರು.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement