ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ.
ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಪೂರ್ವ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಹಂತದಲ್ಲೂ ಚರ್ಚೆಗಳಾಗಿಲ್ಲ. ಇವೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು.
ಈ ಬಗ್ಗೆ ನಮ್ಮ ಪಕ್ಷದಲ್ಲಿ ಎಲ್ಲೂ ಯಾವುದೇ ಹಂತದಲ್ಲೂ ಚರ್ಚೆಗಳೇ ನಡೆದಿಲ್ಲ. ಕೇಂದ್ರ ನಾಯಕತ್ವದಿಂದಲೂ ಯಾವುದೇ ಸೂಚನೆಗಳಿಲ್ಲ. ವಿಧಾನಸಭೆಗೆ ಅವಧಿಗೂ ಮೊದಲೇ ಚುನಾವಣೆ ನಡೆಯುವ ಬಗ್ಗೆ ಚರ್ಚೆಗಳನ್ನು ಮಾಧ್ಯಮಗಳ ಸೃಷ್ಟಿಯಾಗಿದೆ. ಮಾಧ್ಯಮದಲ್ಲಷ್ಟೇ ಚರ್ಚೆಗಳು ನಡೆದಿವೆ. ಬೇರೆಲ್ಲೂ ನಡೆದಿಲ್ಲ ಎಂದು ಅವರು ಹೇಳಿದರು.
ಯಾರೂ ಪಕ್ಷ ಬಿಡುವ ಸುಳಿವು ಇರಲಿಲ್ಲ. ಈಗಲೂ ಇಲ್ಲ. ಮುಂದೆಯೂ ಇರಲ್ಲ ಎಂದು ಅವರು ಹೇಳಿದರು. ಬೇರೆ ಪಕ್ಷಗಳಿಂದ ಬರುವವರ ಬಗ್ಗೆ ಕಾದು ನೋಡಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿ ಸೇರುವವರ ಬಗ್ಗೆ ಮುಖ್ಯಮಂತ್ರಿಗಳು ಸುಳಿವು ನೀಡಿದರು. ವರಿಷ್ಠರು ಯಾವಾಗ ಸೂಚನೆ ಕೊಡುತ್ತಾರೋ ದೆಹಲಿಗೆ ಹೋಗುತ್ತೇನೆ. ವರಿಷ್ಠರ ಸೂಚನೆಯ ನಂತರವೇ ಸಂಪುಟ ಪುನಾರಚನೆಯಾಗಲಿದೆ ಎಂದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement