ಆತುರ ಮಾಡ್ಬೇಡ ಹೇಳ್ದಷ್ಟು ಕೇಳು ಎಂದು ವಿಧಾನಸೌಧದಲ್ಲಿ ಮುಖಾಮುಖಿ ವೇಳೆ ಇಬ್ರಾಹಿಂಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ಕಾಂಗ್ರೆಸ್​ಗೆ ರಾಜೀನಾಮೆ ಕೊಟ್ಟು ಜೆಡಿಎಸ್​ನತ್ತ ಮುಖಮಾಡಿರುವ ಸಿ.ಎಂ.ಇಬ್ರಾಹಿಂ ಅವರನ್ನು ಸೋಮವಾರ ವಿಧಾನಸೌಧದ ಕ್ಯಾಂಟೀನ್​ ಬಳಿ ಮಾತನಾಡಿಸಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದಾರೆ.

ಸಿಎಂ ಇಬ್ರಾಹಿಂರನ್ನು ನೋಡುತ್ತಿದ್ದಂತೆ ನಿಂತು ಮಾತನಾಡಿಸಿದ ಸಿದ್ದರಾಮಯ್ಯ ಅವರು, “ಮಾರ್ಚ್‌ 31ಕ್ಕೆ ಮನೆಗೆ ಬರ್ತೀನಿ, ಅಲ್ಲಿವರೆಗೆ ಸುಮ್ಮನಿರು, ಆತುರಕ್ಕೆ ಬಿದ್ದು ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದರು.
ಅದಕ್ಕೆ ಪ್ರತಿಕ್ರಿಯಿಸಿದ ಇಬ್ರಾಹಿಂ, “ಯಾವಾಗ ಹೇಳಿದ್ರಿ ನೀವು?” ಎಂದು ಮರು ಪ್ರಶ್ನಿಸಿದರು. ‘ಬಾಷಾಗೆ ಹೇಳಿದ್ದೇನೆ.. ಮನೆಗೆ ಬರುತ್ತೇನೆ ಎಂದು ಹೇಳಿದ್ದೇನೆ, ಸುಮ್ಮನಿರು ಎಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಮತ್ತೆ ಇಬ್ರಾಹಿಂ ನೀವು ಎಲ್ಲಿ ಹೇಳಿದ್ರಿ ಎಂದು ಮತ್ತೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ: ಇರೋ.. ಆತುರ ಮಾಡ್ಬೇಡ, ಸುಮ್ಮನಿರು.. ಹೇಳ್ದಷ್ಟು ಕೇಳು.. ಎನ್ನುತ್ತಲೇ ಹೆಜ್ಜೆ ಹಾಕಿದ ಪ್ರಸಂಗ ನಡೆಯಿತು.

. ಇಬ್ರಾಹಿಂ ಅವರು ಮೊನ್ನೆಯಷ್ಟೇ ಸುದ್ದಿಗೋಷ್ಟಿ ನಡೆಸಿ ಕಾಂಗ್ರೆಸ್ ಬಿಡುವ ನಿರ್ಧಾರ ಪ್ರಕಟಿಸಿದ್ದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆನಂತರ ಮಾಜಿ ಪ್ರಧಾನಿ ಎಚ್‍ಡಿಡಿ , ಮಾಜಿ ಸಿಎಂ ಎಚ್‍ಡಿಕೆ ಅವರನ್ನು ಭೇಟಿಯಾಗಿ ಜೆಡಿಎಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದರು.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement