ಹಿಜಾಬ್‌ ನಿಷೇಧ: ಹೈಕೋರ್ಟ್ ತೀರ್ಪು ಪಾಲಿಸಿ, ಕಾಲೇಜುಗಳಿಗೆ ಮರಳಿ ಬನ್ನಿ- ಶಿಕ್ಷಣ ಸಚಿವ ನಾಗೇಶ ಮನವಿ

posted in: ರಾಜ್ಯ | 0

ಬೆಂಗಳೂರು: ಹಿಜಾಬ್‌ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ವಸ್ತ್ರಸಂಹಿತೆಗೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೂ ನ್ಯಾಯಾಲಯ ಇಂದು ತನ್ನ ತೀರ್ಪಿನ ಮೂಲಕ ಉತ್ತರ ನೀಡಿದೆ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಹೈಕೋರ್ಟ್ ತೀರ್ಪು ಪಾಲಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕು.ಶಾಲೆ-ಕಾಲೇಜುಗಳಿಂದ ದೂರ ಉಳಿದಿರುವ ವಿದ್ಯಾರ್ಥಿನಿಯರು ಮತ್ತೆ ಶಿಕ್ಷಣ ಸಂಸ್ಥೆಗಳಿಗೆ ಬರಬೇಕು ಎಂದು ಮನವಿ ಮಾಡಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ನ್ಯಾಯಾಲಯದ ತೀರ್ಪು ಏನು ಬಂದರೂ ಗೌರವಿಸುತ್ತೇನೆ ಎಂದು ಈ ಮೊದಲು ಹೇಳಿದ್ದೆ. ಇಂದಿಗೂ ನನ್ನದು ಅದೇ ನಿಲುವು. ಬಿಜೆಪಿ ಸರ್ಕಾರ ಸದಾ ನ್ಯಾಯಾಲಯದ ತೀರ್ಪುಗಳನ್ನು ಗೌರವಿಸುತ್ತದೆ. ಇದು ಐತಿಹಾಸಿಕ ತೀರ್ಪು. ಈ ತೀರ್ಪಿನ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಸರ್ಕಾರವು ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಇರುವ ಕೆಲ ಗೊಂದಲಗಳನ್ನು ಸರಿಪಡಿಸಲು ಪ್ರಯತ್ನಿಸಲಿದೆ ಎಂದು ಹೇಳಿದರು.

ಸಮವಸ್ತ್ರ ಎನ್ನುವುದು ರಾಷ್ಟ್ರೀಯತೆ ಹಾಗೂ ಸಮಾನತೆ ತರುವುದರಲ್ಲಿ ಸಾಕಷ್ಟು ಸಹಕಾರಿ. ಈ ವಿಷಯ ಹಲವು ವರ್ಷಗಳಿಂದ ನಮಗೆ ಮನವರಿಕೆಯಾಗಿದೆ. ಕೆಲ ಹೆಣ್ಣುಮಕ್ಕಳು ಮಿಸ್​ಗೈಡ್ ಆಗಿದ್ದಾರೆ. ಅವರ ಮನವೊಲಿಸಿ ವಿದ್ಯಾಭ್ಯಾಸ ಮುಂದುವರಿಸಲು ಪ್ರೇರಣೆ ಕೊಡುತ್ತೇವೆ. ಕರ್ನಾಟಕದ ಜನರು ಈ ಹಿಂದೆಯೂ ನ್ಯಾಯಾಲಯದ ತೀರ್ಪು ಗೌರವಿಸಿದ್ದಾರೆ. ಈ ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಬರುತ್ತಾರೆ ಎಂದು ವಿಶ್ವಾಸವಿದೆ ಎಂದರು.

ಇಂದಿನ ಪ್ರಮುಖ ಸುದ್ದಿ :-   ಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ : ಮುಂದೆ..?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement