ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕಡಿದ ಗಂಡ.. ನಂತ್ರ ಮಾಡಿದ ಬೃಹನ್ನಾಟಕ..!

ತುಮಕೂರು: ಲಾಡ್ಜ್​ನಲ್ಲಿ ರೂಂ ಮಾಡಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಾಲನ್ನೇ ಕತ್ತರಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ನಂತರ ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಗದಗ ಮೂಲದ ಬಾಬು (34) ಎಂಬಾತ ಪತ್ನಿಯ ಕಾಲು ಕತ್ತರಿಸಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ. ಕಾಲಿಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿರುವ ಮಹಿಳೆ ಮಧುಗಿರಿ ಮೂಲದವರೆಂದು ಹೇಳಲಾಗಿದೆ.
ಲಾಡ್ಜ್ ಗೆ ಬಂದಿದ್ದ ಬಾಬು ನಾನು ಹೆಂಡತಿಯ ಕಾಲು ಕತ್ತರಿಸಿದ್ದೇನೆ ಆಸ್ಪತ್ರೆಗೆ ಸೇರಿಸಬೇಕು, ನಾಲ್ವರು ಹುಡುಗರನ್ನು ಕಳುಹಿಸಿ ಎಂದು ಹೋಟೆಲ್ ಮಾಲೀಕರಿಗೆ‌ ಹೇಳಿದಾಗಲೇ ಈ ಘಟನೆ ಬಗ್ಗೆ ಗೊತ್ತಾಗಿದೆ.
ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಬಾಬು ಬುಧವಾರ ಬೆಳಗ್ಗೆ 6 ಗಂಟೆ ವೇಳೆಗೆ ಲಾಡ್ಜ್ ಗೆ ಪತ್ನಿಯೊಂದಿಗೆ ಬಂದಿದ್ದ ಎನ್ನಲಾಗಿದೆ. ಬರುವಾಗ ಬ್ಯಾಗ್ ನಲ್ಲಿ ಮಚ್ಚು ತೆಗೆದುಕೊಂಡು ಬಂದಿದ್ದು, ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಲಾಡ್ಜ್ ಗೆ ಕರೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ. ಮಚ್ಚಿನಿಂದ ಪತ್ನಿಯ ಕಾಲನ್ನು ಕತ್ತರಿಸಿದ ಬಳಿಕ ತನ್ನ ಹೊಟ್ಟೆಗೆ ಚಾಕು ಚುಚ್ಚಿಕೊಂಡಿದ್ದಾನೆ. ಈ ಘಟನೆ ಸಂಬಂಧ ಕೂಡಲೇ ಹೋಟೆಲ್ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ತದಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಪತಿ ಬಾಬುವನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement