ರಾಜ್ಯಸಭಾ ಚುನಾವಣೆಗೆ ಹರ್ಭಜನ್ ಸಿಂಗ್ ಎಎಪಿ ಪಂಜಾಬ್ ಅಭ್ಯರ್ಥಿ

ಚಂಡೀಗಡ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಈ ವರ್ಷ ರಾಜ್ಯಸಭೆಗೆ ಆಮ್ ಆದ್ಮಿ ಪಕ್ಷದ ಪಂಜಾಬ್ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷ ಘೋಷಿಸಿದೆ.
ಈ ತಿಂಗಳ ಅಂತ್ಯದ ವೇಳೆಗೆ ಆಮ್ ಆದ್ಮಿ ಪಕ್ಷವು ರಾಜ್ಯಸಭೆಯಲ್ಲಿ ಐದು ಸ್ಥಾನಗಳನ್ನು ಪಡೆಯಲಿದೆ. ಫೆಬ್ರವರಿಯಲ್ಲಿ ನಡೆದ ಪಂಜಾಬ್ ಚುನಾವಣೆಗೂ ಮುನ್ನ ‘ಟರ್ಬನೇಟರ್’ ಹರ್ಭಜನ್ ಸಿಂಗ್ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ವದಂತಿಗಳು ಅಲ್ಲಿಗೆ ನಿಲ್ಲಲಿಲ್ಲ, ಕೆಲವೇ ದಿನಗಳ ನಂತರ, ಅನುಭವಿ ಕ್ರಿಕೆಟಿಗ ಅಂದಿನ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗೆ ಪೋಸ್ ನೀಡಿದ್ದರು. ಈಗ, ಎಎಪಿಯ ಘೋಷಣೆಯೊಂದಿಗೆ, ಎಲ್ಲಾ ವದಂತಿಗಳಿಗೆ ತೆರೆ ಬಿದ್ದಂತಿದೆ.ಚಂಡೀಗಡ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಈ ವರ್ಷ ರಾಜ್ಯಸಭೆಗೆ ಆಮ್ ಆದ್ಮಿ ಪಕ್ಷದ ಪಂಜಾಬ್ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷ ಘೋಷಿಸಿದೆ.
ಈ ತಿಂಗಳ ಅಂತ್ಯದ ವೇಳೆಗೆ ಆಮ್ ಆದ್ಮಿ ಪಕ್ಷವು ರಾಜ್ಯಸಭೆಯಲ್ಲಿ ಐದು ಸ್ಥಾನಗಳನ್ನು ಪಡೆಯಲಿದೆ. ಫೆಬ್ರವರಿಯಲ್ಲಿ ನಡೆದ ಪಂಜಾಬ್ ಚುನಾವಣೆಗೂ ಮುನ್ನ ‘ಟರ್ಬನೇಟರ್’ ಹರ್ಭಜನ್ ಸಿಂಗ್ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ವದಂತಿಗಳು ಅಲ್ಲಿಗೆ ನಿಲ್ಲಲಿಲ್ಲ, ಕೆಲವೇ ದಿನಗಳ ನಂತರ, ಅನುಭವಿ ಕ್ರಿಕೆಟಿಗ ಅಂದಿನ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗೆ ಪೋಸ್ ನೀಡಿದ್ದರು. ಈಗ, ಎಎಪಿಯ ಘೋಷಣೆಯೊಂದಿಗೆ, ಎಲ್ಲಾ ವದಂತಿಗಳಿಗೆ ತೆರೆ ಬಿದ್ದಂತಿದೆ.

ಪ್ರಮುಖ ಸುದ್ದಿ :-   ಭಾರತದ ವಾಯುದಾಳಿಗೆ ಪಾಕಿಸ್ತಾನ ಸೇನೆ ತತ್ತರ : ನೂರ್ ಖಾನ್ ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್‌ ನಲ್ಲಿ ಅಡಗಿದ ಪಾಕ್‌ ಸೇನಾ ಮುಖ್ಯಸ್ಥ..?!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement