ಗುವಾಹಟಿ : ಅಪ್ರಾಪ್ತ ವಿದ್ಯಾರ್ಥಿನಿನಿಯರ ಮೇಲೆ ಅತ್ಯಾಚಾರ ಎಸಗಿದ್ದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಗುವಾಹಟಿಯ ಹೊರವಲಯದಲ್ಲಿ ಅಪರಾಧ ಸ್ಥಳದ ಮಹಜರಿಗಾಗಿ ಬಂದಿದ್ದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಗುಂಡುಹಾರಿಸಿ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ.
ಬಿಕಿಅಲಿ (20), ರಾಜೇಶ್ ಮುಂಡಾ (38) ಎಂಬ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರಿಂದಾಗಿ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಎಸ್ಪಿ ಅಭಿಜಿತ್ ಶರ್ಮಾ, ಅಲಿಯ ದೇಹದ ನಾಲ್ಕು ಭಾಗಗಳಲ್ಲಿ ಗಾಯದ ಗುರುತುಗಳಾಗಿವೆ. ಒಂದು ಎದೆಯ ಭಾಗದಲ್ಲಿ ಉಳಿದ ಮೂರು ಬೆನ್ನಿನ ಭಾಗದಲ್ಲಿ ಗಾಯಗಳಾಗಿದ್ದವು. ಆರೋಪಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಗುಂಡಿನ ಗಾಯದ ಪೂರ್ಣ ವಿವರಗಳು ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಮತ್ತೊಬ್ಬ ಆರೋಪಿ ರಾಜೇಶ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರ ಗುಂಡೇಟಿಗೆ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.ಅಲ್ಲದೆ, ಗುವಾಹಟಿಯ ಪನ್ಬಜಾರ್ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ಟ್ವಿಂಕಲ್ ಗೋಸ್ವಾಮಿ ಸಹ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾಲು ಮತ್ತು ಕೈಗೆ ಗಾಯಗಳಾಗಿರುವ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಶರ್ಮಾ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ