ಮಂಗಳೂರು: ಕೆಸ್ಆರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಸಹೋದರರಿಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಗರ್ಡಾಡಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿಗಳಾದ ಸಿರಾಜ್, ಸಾದಿಕ್ ಎಂದು ಗುರುತಿಸಲಾಗಿದೆ. ಮೃತಪಟ್ಟವರ ಮನೆಗೆ ಹೋಗಿ ಹಿಂದಿರುಗಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸಾವಿಗೀಡಾದ ಇಬ್ಬರೂ ವಿದೇಶದಲ್ಲಿ ಉದ್ಯೋಗದಲ್ಲಿದ್ದವರು ಎಂದು ಹೇಳಲಾಗಿದೆ. ಹೆಚ್ಚಿನ ವಿವಿರ ತಿಳಿದುಬರಬೇಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ