ಕಾಂಗ್ರೆಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳಿಂದಲೂ ಸಮಾಜದಲ್ಲಿ ಒಡಕು ಸೃಷ್ಟಿ: ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ವಿವಿಧ ಕಾರಣಗಳಿಗಾಗಿ ಜನರಲ್ಲಿ ಒಡಕು ಮೂಡಿಸುತ್ತವೆ ಎಂದು ಹೇಳಿದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ಜಿ 23 ಗುಂಪಿನ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.
1990ರ ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯೆಗಳನ್ನು ಉಲ್ಲೇಖಿಸಿ, ಇದಕ್ಕೆ ಪಾಕಿಸ್ತಾನ ಮತ್ತು ಕಣಿವೆಯಲ್ಲಿ ನಡೆದ ಭಯೋತ್ಪಾದನೆ ಕಾರಣ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಯಿತು ಎಂಬುದಕ್ಕೆ ಪಾಕಿಸ್ತಾನ ಮತ್ತು ಉಗ್ರಗಾಮಿತ್ವ ಕಾರಣವಾಗಿದೆ. ಇದು ಹಿಂದೂಗಳು, ಕಾಶ್ಮೀರಿ ಪಂಡಿತರು, ಮುಸ್ಲಿಮರು, ಡೋಗ್ರಾಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲರ ಮೇಲೆ ಪರಿಣಾಮ ಬೀರಿದೆ” ಎಂದು ಆಜಾದ್ ಹೇಳಿದ್ದಾರೆ.
1990ರ ಕಾಶ್ಮೀರಿ ಪಂಡಿತರ ವಲಸೆಯನ್ನು ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಕುರಿತು ನಡೆಯುತ್ತಿರುವ ವಿವಾದದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ.

ರಾಜಕೀಯ ಪಕ್ಷಗಳು ಧರ್ಮ, ಜಾತಿ ಮತ್ತು ಇತರ ವಿಷಯಗಳ ಆಧಾರದ ಮೇಲೆ (ಜನರ ನಡುವೆ) 24×7 ವಿಭಜನೆಯನ್ನು ಸೃಷ್ಟಿಸುತ್ತವೆ, ನನ್ನ (ಕಾಂಗ್ರೆಸ್) ಪಕ್ಷ ಸೇರಿದಂತೆ ಯಾವುದೇ ಪಕ್ಷವನ್ನು ನಾನು ಕ್ಷಮಿಸುವುದಿಲ್ಲ, ನಾಗರಿಕ ಸಮಾಜವು ಒಟ್ಟಾಗಿ ಇರಬೇಕು, ಜಾತಿ-ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ನ್ಯಾಯವನ್ನು ನೀಡಬೇಕು ಎಂದು ಆಜಾದ್ ಹೇಳಿದ ಅವರು, ಮಹಾತ್ಮಾ ಗಾಂಧಿ ಅತಿದೊಡ್ಡ ಹಿಂದೂ ಮತ್ತು ಜಾತ್ಯತೀತವಾದಿ ಎಂದು ಹೇಳಿದ್ದಾರೆ.
1990ರ ದಶಕದಲ್ಲಿ ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ಕೇಂದ್ರೀಕರಿಸುವ ಈ ಚಲನಚಿತ್ರವು ಮಾರ್ಚ್ 11 ರಂದು ಬಿಡುಗಡೆಯಾದಾಗಿನಿಂದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಘಟನೆಗಳ ಚಿತ್ರಣದ ಬಗ್ಗೆ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅದನ್ನು ಕೆಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement