ತಾನು ಹೇಳಿದ ಅಭ್ಯರ್ಥಿಗೆ ಮತ ಹಾಕಲಿಲ್ಲವೆಂದು ಹೆಂಡತಿಗೆ ಹೊಡೆದು, ಮನೆಯಿಂದ ಹೊರಹಾಕಿದ ಪತಿ ಮಹಾಶಯ..!

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಅವರು ಸೋಮವಾರ ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದು, ತಾನು ಸೂಚಿಸಿದ ಪಕ್ಷದ ಅಭ್ಯರ್ಥಿಗೆ ಮತ ಹಾಕದ ಕಾರಣಕ್ಕೆ ಪತ್ನಿಗೆ ಹೊಡೆದು ಮನೆಯಿಂದ ಹೊರಹಾಕಿದ ಮಹಿಳೆಯ ಪತಿ ಮತ್ತು ಕುಟುಂಬದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ ಬರೇಲಿಯ ಮುಸ್ಲಿಂ ಮಹಿಳೆಗೆ ಆಕೆಯ ಗಂಡ ಚುನಾವಣೆಯಲ್ಲಿ ತಾನು ಸೂಚಿಸಿದ ಪಕ್ಷದ ಅಭ್ಯರ್ಥಿಗೆ ಮತ ಹಾಕಲು ಹೇಳಿದ್ದ. ಆದರೆ, ಆಕೆ ಬೇರೆಯವರಿಗೆ ಮತ ಹಾಕಿದ್ದರಿಂದ ಕೋಪಗೊಂಡ ಆತ ತನ್ನ ಹೆಂಡತಿಗೆ ಹೊಡೆದು, ಮನೆಯಿಂದ ಹೊರಹಾಕಿದ್ದಾನೆ. ಇದರ ವರದಿಗಳು ಹಲವಾರು ಮಾಧ್ಯಮಗಳ ಪ್ರಕಟವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು)ದಿಂದ ಈ ಕ್ರಮ ಬಂದಿದೆ. ಸಂತ್ರಸ್ತೆಯ ಪತಿ ಆಕೆಗೆ ವಿಚ್ಛೇದನ ನೀಡುವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ವರದಿಯಾಗಿದೆ.

ಎನ್‌ಸಿಡಬ್ಲ್ಯು ಈ ವಿಷಯವನ್ನು ಅರಿತುಕೊಂಡಿದೆ ಮತ್ತು ಆರೋಪಗಳು ನಿಜವೆಂದು ಕಂಡುಬಂದಲ್ಲಿ ಕಾನೂನಿನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ಅನ್ನು ನೋಂದಾಯಿಸಲು ಕೋರಿದೆ.
ಈ ವಿಷಯದಲ್ಲಿ ತೆಗೆದುಕೊಂಡ ಕ್ರಮವನ್ನು ಏಳು ದಿನಗಳಲ್ಲಿ ಆಯೋಗಕ್ಕೆ ತಿಳಿಸಬೇಕು” ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಪತ್ರದ ಪ್ರತಿಯನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಬರೇಲಿ ಅವರಿಗೂ ಕಳುಹಿಸಲಾಗಿದೆ.

ಪ್ರಮುಖ ಸುದ್ದಿ :-   ಯು ಪಿ ಎಸ್ ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್, ಟಾಪ್‌-20 ರ‍್ಯಾಂಕ್ ಪಡೆದವರ ಪಟ್ಟಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement