ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಬಿಬಿಎಂಪಿ ಲಾರಿ; ಬಾಲಕಿ ಸಾವು, 8 ಮಂದಿಗೆ ಗಾಯ

ಬೆಂಗಳೂರು: ಡಿವೈಡರ್ ಮೂಲಕ‌ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ‌ ಬಿಬಿಎಂಪಿ‌ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ ಸೋಮವಾರ ನಡೆದಿದೆ.
ಘಟನೆಯಲ್ಲಿ ಇತರ 8 ಮಂದಿಗೆ ಗಾಯವಾಗಿದೆ. ಮೃತ ಬಾಲಕಿಯನ್ನು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ಅಕ್ಷಯಾ ಎಂದು ಗುರುತಿಸಲಾಗಿದೆ.

ನಿನ್ನೆ (ಭಾನುವಾರ) ರಾತ್ರಿ ಮಳೆಯಾಗಿದ್ದರಿಂದ‌ ಹೆಬ್ಬಾಳ ಪೊಲೀಸ್ ಠಾಣೆ‌ ಮುಂಭಾಗದಲ್ಲಿರುವ ಅಂಡರ್ ಪಾಸ್​​ನಲ್ಲಿ ನೀರು ತುಂಬಿಕೊಂಡಿತ್ತು. ಹೀಗಾಗಿ ಪಾದಚಾರಿಗಳಿಗೆ ಹೋಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸಾರ್ವಜನಿಕರು ಮುಖ್ಯ ರಸ್ತೆಯಿಂದಲೇ ರಸ್ತೆ ದಾಟಬೇಕಿತ್ತು. ಅಕ್ಷಯಾ ಸಹ ರಸ್ತೆ ದಾಟಲು ಇತರರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಪಾದಚಾರಿಗಳ ಮೇಲೆ ಹರಿದಿದೆ. ಅಲ್ಲದೆ ಲಾರಿ ಮುಂದೆ ಹೋಗುತ್ತಿದ್ದ ಬೈಕ್, ಕಾರ್​​ಗಳಿಗೂ ಗುದ್ದಿದ ಪರಿಣಾಮ ಸರಣಿ ಅಪಘಾತ ನಡೆದಿದೆ. ಬೈಕ್ ಹಾಗೂ ಕಾರುಗಳು ಹಾನಿಗೊಳಗಾಗಿವೆ. ಪರಿಣಾಮ ಬಾಲಕಿ ಅಕ್ಷಯಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಇತರ 8 ಮಂದಿಗೆ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆರ್.ಟಿ.ನಗರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಈ ಜಿಲ್ಲೆಗಳಲ್ಲಿ 6-7 ದಿನ ಮಳೆ ಸಾಧ್ಯತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement