ಶ್ರೀಪಾದ ಭಟ್ಟರಿಗೆ ಅಭಿನಯ ಭಾರತಿ ರಂಗ ಪ್ರಶಸ್ತಿ

ಹುಬ್ಬಳ್ಳಿ: ನಾಡಿನ ಹೆಸರಾಂತ ರಂಗಕರ್ಮಿ, ನಿರ್ದೇಶಕ ಡಾ. ಶ್ರೀಪಾದ ಭಟ್ಟ ಅವರಿಗೆ ಪ್ರಸಕ್ತ ಸಾಲಿನ  ಧಾರವಾಡದ ಅಭಿನಯ ಭಾರತಿ ರಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಧಾರವಾಡ ರಂಗಾಯಣದ ಸಹಯೋಗದೊಂದಿಗೆ ಸಂಸ್ಕೃತಿ ಸಮುಚ್ಚಯ ಭವನದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ10:30 ಗಂಟೆಗೆ ಪ್ರದಾನ ಮಾಡಲಾಗುತ್ತದೆ.

ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಶ್ರೀಪಾದ‌ ಭಟ್ಟರು ನಂತರ ಸ್ವಯಂ ನಿವೃತ್ತಿ ಪಡೆದು ಪೂರ್ಣಾವಧಿ ರಂಗಭೂಮಿಯ ಕೆಲಸಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ತಂದೆಯವರಿಂದ ಯಕ್ಷಗಾನ ಕಲೆಯ ವಿವಿಧ ಆಯಾಮಗಳನ್ನು ಬಳುವಳಿಯಾಗಿ ಪಡೆದು, ರಂಗ ಚಿಂತನೆಯನ್ನು ಸಾಹಿತ್ಯಿಕ ಮೌಲ್ಯಗಳೊಂದಿಗೆ ಸಮುದಾಯ, ಜನಪದ, ರಂಗಭೂಮಿ, ಮಕ್ಕಳ ರಂಗಭೂಮಿ, ವಿಜ್ಞಾನ ಮತ್ತು ಕಲೆಯ ಸಾಕ್ಷರತಾ ಚಳುವಳಿಗಾಗಿ ಅನ್ವಯಿಸುವ ಮಾರ್ಗಗಳನ್ನು ಹುಡುಕುತ್ತ ಭಾರತೀಯ ರಂಗ‌ಭೂಮಿಯಲ್ಲಿ ಖ್ಯಾತಿ ಪಡೆದಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪಡೆದಿರುವ ಅವರು,  ಶಿಕ್ಷಣದಲ್ಲಿ ರಂಗಭೂಮಿ ಕುರಿತು ಚಿಣ್ಣರ ಮೇಳ ಕಾರ್ಯಾಗಾರಗಳನ್ನು ನಡೆಸಿದ್ದಾರೆ. ರಾಜ್ಯಾದ್ಯಂತ ರಂಗಭೂಮಿಗೆ ನವ ಮನ್ವಂತರ ದೀಕ್ಷೆ ನೀಡಿದ್ದಾರೆ.
ಮಹಾತ್ಮ ಗಾಂಧಿಯವರ 150ನೇ ಜಯಂತಿ ಸಂದರ್ಭದಲ್ಲಿ ಶ್ರೀಪಾದ ಭಟ್ಟರ ನಿರ್ದೇಶನದಲ್ಲಿ “ಪಾಪು ಬಾಪು” ನಾಟಕ 2000ಕ್ಕೂ ಮಿಕ್ಕಿ ಪ್ರದರ್ಶನಗಳು ನಾಡಿನೆಲ್ಲೆಡೆ ಪ್ರದರ್ಶನಗೊಂಡು ರಂಗಭೂಮಿಯಲ್ಲಿ ನೂತನ ದಾಖಲೆ ನಿರ್ಮಿಸಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ ಹಾಗೂ ಕುವೆಂಪು ವಿಶ್ವವಿದ್ಯಾಲಯಗಳು ರಂಗ ಡಿಪ್ಲೋಮಾ ತರಬೇತಿಗಾಗಿ ಪಠ್ಯಕ್ರಮ ರೂಪಿಸುವ ವಿಶೇಷ ಜವಾಬ್ದಾರಿಯನ್ನು ಶ್ರೀಪಾದ ಭಟ್ಟರಿಗೆ ವಹಿಸಿದೆ. ರಂಗಭೂಮಿ ಇವರಿಂದ ಜನಪದ ರಂಗಭೂಮಿ, ಬಹು‌ಭೂಮಿಕೆ, ಉತ್ತರ ಕನ್ನಡ ಯಕ್ಷಗಾನ, ‌ನಟನೆ‌ ಕೈಪಿಡಿ ಕೃತಿಗಳು ಬಂದಿವೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement