ಮಾತು ಬಾರದ, ಕಿವಿ ಕೇಳದ ಯುವಕನ ವರಿಸಿದ ಪದವೀಧರ ಯುವತಿ

ನರಗುಂದ (ಗದಗ): ಕಂಕಣ ಬಲ ಕೂಡಿಬಂದರೆ ಯಾರೂ ತಡೆಯಲು ಸಾಧ್ಯವಿಲ್ಲ ಎಂಬಂತೆ ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿಯೊಬ್ಬರು ವರಿಸಿದ್ದಾರೆ.
ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಸುಮಯ್ಯಾ ಭಾನುವಾರ ಮದುವೆಯಾದರು. ಸೋಮವಾರ ಪಟ್ಟಣದಲ್ಲಿ ವಲೀಮಾ ನಡೆಯಿತು.

ನರಗುಂದದ ನಿವಾಸಿ ವರ ಮಹಮ್ಮದ್ ಸಾಧಿಕ್ ನರೇಗಲ್‌ನ ಶ್ರೀಅನ್ನದಾನೇಶ್ವರ ಕಿವುಡ ಮತ್ತು ಮೂಕರ ಶಾಲೆಯಲ್ಲಿ ಪ್ರೌಢ ಶಿಕ್ಷಣದ ವರೆಗೆ ಪೊರೈಸಿದ್ದು, ನಂತರ ಮೈಸೂರಿನ ಜೆಎಸ್‍ಎಸ್ ಕಾಲೇಜ್‍ನಲ್ಲಿ ಪಿಯುಸಿ ಓದಿ ಆಟೋ ಇಲೆಕ್ಟ್ರೀಷಿಯನ್ ಆಗಿ ಸ್ವಂತ ಉದ್ಯೋಗ ಮಾಡಿಕೊಂಡಿದ್ದಾರೆ.
ವರನಿಗೆ ದೂರದ ಸಂಬಂಧಿ ಆಗಿರುವ ಮದುಮಗಳು ಸುಮಯ್ಯಾ ನರಗುಂದದ ಶಾರದಾಂಬಾ ಶಾಲೆಯಲ್ಲಿ 1 ರಿಂದ 10ನೇ ತರಗತಿ ಓದಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ವರ್ಷ ಕಲಾ ಶಿಕ್ಷಣ ಪಡೆದು ನಂತರ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement