ಮೈಸೂರು: ಸ್ವಾಮೀಜಿಗಳ ಜೊತೆ ನಾನು ಯಾವತ್ತೂ ಅಗೌರವದಿಂದ ನಡೆದುಕೊಂಡಿಲ್ಲ. ಮೊದಲಿನಿಂದಲೂ ಅವರೊಂದಿಗೆ ಸಂಬಂಧ ಚೆನ್ನಾಗಿದೆ. ಅಪಾರ ಗೌರವವಿಟ್ಟುಕೊಂಡಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ವಿಚಾರವಾಗಿ ಪ್ರಶ್ನೆಯನ್ನೇ ಮಾಡಿಲ್ಲ. ಹಿಜಾಬ್ ಬೇರೆ, ದುಪ್ಪಟ್ಟಾ ಬೇರೆ. ಸಮವಸ್ತ್ರ ಜೊತೆಗೆ ಅದೇ ಬಣ್ಣದ ದುಪ್ಪಟ್ಟಾ ಹಾಕಿಕೊಂಡು ಪರೀಕ್ಷೆ ಬರೆಯಲು ಹೆಣ್ಣು ಮಕ್ಕಳಿಗೆ ಅವಕಾಶ ಮಾಡಿಕೊಡಿ ಎಂಬುದಾಗಿ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದೇನೆ ಅಷ್ಟೆ. ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನನ್ನ ಉದ್ದೇಶ. ಸಲಹೆ ಸ್ವೀಕರಿಸುವುದು ಸರ್ಕಾರಕ್ಕೆ ಬಿಟ್ಟ ವಿಚಾರ’ ಎಂದರು.
ಮಾಧ್ಯಮದವರ ವಿರುದ್ಧ ಗರಂ ಆದ ಸಿದ್ದರಾಮಯ್ಯ, ನಿನ್ನೆ ನಾನು ಹಿಜಾಬ್ ಪದವನ್ನೇ ಬಳಸಿಲ್ಲ. ಹಿಜಾಬೇ ಬೇರೆ, ದುಪ್ಪಟ್ಟಾವೇ ಬೇರೆ, ಬುರ್ಕಾನೇ ಬೇರೆ. ಇದನ್ನು ನೀವು ಯಾವುದ್ಯಾವುದಕ್ಕೋ ಲಿಂಕ್ ಮಾಡಿ ವಿವಾದ ಸೃಷ್ಟಿ ಮಾಡಿದ್ದೀರಿ. ನೀವೇ ಪ್ರಶ್ನೆ ಕೇಳಿ ಈಗ ವಿವಾದ ಹುಟ್ಟು ಹಾಕಿದ್ದೀರಿ. ಎಂದು ಮಾಧ್ಯಮದವರ ಮೇಲೆ ಸಿದ್ದರಾಮಯ್ಯ ಗರಂ ಆದರು.
ನಿಮ್ಮ ಕಾಮೆಂಟ್ ಬರೆಯಿರಿ