ಎಸ್‌ಎಸ್‌ಎಲ್‌ಸಿ:ಬೇರೆಯವರ ಪರವಾಗಿ ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ 6 ನಕಲಿ ಅಭ್ಯರ್ಥಿಗಳು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್‌.ಡಿ. ಕಾಲೇಜು ಕೇಂದ್ರದಲ್ಲಿ ಪರೀಕ್ಷೆಗೆ ಕುಳಿತಿದ್ದ ವಿದ್ಯಾರ್ಥಿಗಳ ಪರವಾಗಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲು ಬಂದಿದ್ದ 6 ಮಂದಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಗೋಕಾಕ ತಾಲೂಕು ಗೋಡಗೇರಿಯ ರಾಹುಲ್ ಕಿಳ್ಳಿಕೇತರ, ಕೊಂಕಣಿವಾಡಿಯ ಭೀಮಶಿ ಹುಲಿಕುಂದ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಕೊಪ್ಪ ಎಸ್‍.ಕೆ. ಗ್ರಾಮದ ಕಾರ್ತಿಕ ಕುಂಬಾರ, ಚಿಕ್ಕಾಲಕೊಪ್ಪ ಗ್ರಾಮದ ಸಿದ್ದು ಜೋಗಿ, ಗಿರಸಾಗರ ಗ್ರಾಮದ ಮಹಾಂತೇಶ್ ಡೊಳ್ಳಿನವರ ಮತ್ತು ಬಾಗಲಕೋಟೆ ಜಿಲ್ಲೆ ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ಸವಿತಾ ಹೊಸೂರು ಸಿಕ್ಕಿಬಿದ್ದವರು ಎಂದು ಹೇಳಲಾಗಿದೆ.
ಪ್ರವೇಶ ದ್ವಾರದಲ್ಲಿ ವಿದ್ಯಾರ್ಥಿಗಳ ಗುರುತಿನ ಚೀಟಿ ಮೊದಲಾದ ದಾಖಲೆಗಳನ್ನು ಪರಿಶೀಲಿಸುವಾಗ, ಆರು ಮಂದಿ ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದರು. ನಂತರ ಅವರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement