ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ವಿಚಿತ್ರ ಘಟನೆಯೊಂದು ನಡೆದಿದೆ. ಪರೀಕ್ಷಾ ಮೇಲ್ವಿಚಾರಕ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿರುವ ಘಟನೆ ಹೊಸನಗರದಲ್ಲಿ ನಡೆದಿದೆ. ಈ ಟಿವಿ ಭಾರತ ಕನ್ನಡ.ಕಾಮ್ ವರದಿ ಪ್ರಕಾರ, ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ನಿನ್ನೆ ಪರೀಕ್ಷೆ ಬರೆಯುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ವಿದ್ಯಾರ್ಥಿಯು ನಕಲು ಮಾಡುತ್ತಿದ್ದನಂತೆ. ಇದನ್ನು ಪರೀಕ್ಷಾ ಮೇಲ್ವಿಚಾರಕ ಗಮನಿಸಿದ್ದಾರೆ. ಆಗ ಆತನ ಬಳಿ ಹೋಗಿ ನಕಲು ಮಾಡಿದ್ದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ವಿದ್ಯಾರ್ಥಿ ಕುಪಿತಗೊಂಡು ಮೇಲ್ವಿಚಾರಕರ ಬಳಿ ವಾದ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮೇಲ್ವಿಚಾರಕರು ವಿದ್ಯಾರ್ಥಿಯ ಎಡಗೈ ಕಚ್ಚಿದ್ದಾರೆ. ತಕ್ಷಣ ವಿದ್ಯಾರ್ಥಿ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಈ ಕುರಿತು ವಿದ್ಯಾರ್ಥಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ನಂತರ ಹಿರಿಯರ ಮಧ್ಯಸ್ಥಿಕೆ ನಡೆಸಿ ಪೊಲೀಸ್ ಠಾಣೆಯಲ್ಲಿ ರಾಜಿ ನಡೆಸಿದ್ದು, ವಿದ್ಯಾರ್ಥಿಯು ತನ್ನ ದೂರನ್ನು ವಾಪಸ್ ಪಡೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ ಎಂದು ಈ ಟಿವಿ ಭಾರತ ಕನ್ನಡ.ಕಾಮ್ ವರದಿ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ