ಕರ್ನಾಟಕದ ಹಲವು ಜಿಲ್ಲೆಗಳಿಗೆ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ

ಬೆಂಗಳೂರು : ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಏಪ್ರಿಲ್ 6 ರ ವರೆಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಕೇಂದ್ರ ಬೆಂಗಳೂರಿನ ತಜ್ಞರಾದ ಸದಾನಂದ ಅಡಿಗ ಮಾತನಾಡಿ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ. ಏಪ್ರಿಲ್ 5 ಹಾಗೂ 6 ರಂದೂ ಕೂಡಾ ಹಲವೆಡೆ ಮಳೆ ಸಾಧ್ಯತೆ ಇದೆ, ಗುಡುಗು- ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಒಣಹವೆ ಇರಲಿದ್ದು, ಎಪ್ರಿಲ್ 5 ಹಾಗೂ 6 ರಂದು ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ ಹಾಗೂ ಮಲೆನಾಡಿನ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಏ.6 ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement