ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಕೊಟ್ಟ ಸನ್ಮಾನ ಏನೆಂದು ನಿಮಗೆ ಗೊತ್ತಾ: ಸಿದ್ದರಾಮಯ್ಯಗೆ ಮಾತಿನಲ್ಲಿ ತಿವಿದ ಸುರೇಶಕುಮಾರ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನೀಡಿದ ಹೇಳಿಕೆಗಳಿಗೆ ಮಾಜಿ ಸಚಿವ ಸುರೇಶಕುಮಾರ್ ತಿರುಗೇಟು ನೀಡಿದ್ದಾರೆ.
ಡಾ.ಬಾಬು ಜಗಜೀವನ್ ರಾಮ್‍ರ ಜಯಂತಿ ಆಚರಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುರೇಶಕುಮಾರ, ದಲಿತರ ಏಳಿಗೆಗೆ ದುಡಿದ ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಪಕ್ಷದವರು ಕೊಟ್ಟ ಸನ್ಮಾನ ನಿಮಗೆ ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಾಬು ಜಗಜೀವನ್ ರಾಮ್ ಇದ್ದ ಕಾಂಗ್ರೆಸ್ಸಿನಲ್ಲಿ ನೀವಿದ್ದೀರೇ ಎಂದು ಕೇಳಿದ್ದಾರೆ.

ಬಾಬು ಜಗಜೀವನರಾಂ ಅವರು ಕಾಂಗ್ರೆಸ್ ಪಕ್ಷ ತ್ಯಜಿಸಿ, ಕಾಂಗ್ರೆಸ್ ಫಾರ್ ಡೆಮಾಕ್ರಸಿ (ಇಊಈ) ಪ್ರಾರಂಭ ಮಾಡಿದ್ದರು. ಬಿಜೆಪಿ ದೇಶದಲ್ಲಿ ಅಧಿಕಾರಕ್ಕೆ ಬಂದದ್ದು ಯಾವಾಗ ಎಂಬುದು ನಿಮಗೆ ಗೊತ್ತಿದೆಯೇ ಎಂದು ಸಹ ಕೇಳಿದ್ದಾರೆ.

ನೀವು ಎಂದಾದರೂ ಜೈಲಿಗೆ ಹೋಗಿದ್ದಿರಾ? ನೀವು ಆಸ್ತಿಪಾಸ್ತಿ ಕಳೆದು ಕೊಂಡಿದ್ದೀರಾ ಎಂದು ಕೇಳಿರುವ ಸುರೇಶಕುಮಾರ, ದೇಶದ ಮಹಾನ್ ನಾಯಕರ ಜಯಂತಿಯಂದು ರಾಜಕೀಯ ಮಾತುಗಳ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ರಾಜಕೀಯಕ್ಕಾಗಿ ಅವಾಸ್ತವಿಕ ಸಂಗತಿಗಳನ್ನು ಹೇಳುವ ಮೂಲಕ ಜಯಂತಿ ಕಾರ್ಯಕ್ರಮ ಚುನಾವಣಾ ವೇದಿಕೆಯಂತಾಗಿತ್ತು.
ಇಂತಹ ಕಾರ್ಯಕ್ರಮಗಳು ಜನರಿಗೆ ಪ್ರೇರಣೆ ತುಂಬುವ, ಮಹಾನ್ ವ್ಯಕ್ತಿಗಳ ಬದುಕು ವಿಚಾರ ತಿಳಿಸುವ ಕಾರ್ಯಕ್ರಮಗಳಾಗಬೇಕಲ್ಲವೇ ಎಂದು ಸಿದ್ದರಾಮಯ್ಯ ಅವರನ್ನು ಮಾತಿನಿಂದ ತಿವಿದಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement