ಗದಗ : ಜಿಲ್ಲಾ ಕಾರಾಗೃಹದಲ್ಲಿ ಯುವಕ ಆತ್ಮಹತ್ಯೆ

ಗದಗ: ವಿಚಾರಣಾಧೀನ ಕೈದಿಯೊಬ್ಬ ಸಹ ಕೈದಿಯ ಟವೆಲ್ ಮೂಲಕ ಜೈಲು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪೋಕ್ಸೊ ಪ್ರಕಣದಲ್ಲಿ ಜೈಲು ಸೇರಿದ್ದ ಗದಗ ತಾಲ್ಲೂಕಿನ ಅಡವಿ ಸೋಮಾಪುರ ಗ್ರಾಮದ ರಾಜು ಲಮಾಣಿ (19) ಗುರುವಾರ ರಾತ್ರಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಜು ಲಮಾಣಿ, ಅದೇ ಕಾಲೇಜಿನಲ್ಲಿ ಪ್ರಥಮ ಮೊದಲ ವರ್ಷದ ಪಿಯು ಓದುತ್ತಿದ್ದ ಹುಡುಗಿಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಗೋವಾಕ್ಕೆ ಓಡಿ ಹೋಗಿದ್ದರು. ಬಳಿಕ ಹುಡುಗಿಯ ಪೋಷಕರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು. 20 ದಿನಗಳಿಂದ ಜೈಲಿನಲ್ಲಿ ಇದ್ದ ಯುವಕ ಯುವಕ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶುಕ್ರವಾರ ಮಧ್ಯಾಹ್ನ 2:30ಕ್ಕೆ ಆತ ಹೊರಬರುವವನಿದ್ದ ಎಂದು ಹೇಳಲಾಗಿದೆ. ಆದರೆ, ತನಗೆ ಬೇಲ್ ಸಿಗುವುದಿಲ್ಲ ಎಂಬ ಭೀತಿ ಹಾಗೂ ಜಾಮೀನು ಸಿಕ್ಕ ವಿಷಯದ ಬಗ್ಗೆ ಮಾಹಿತಿ ಸಿಗದ ಕಾರಣ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಯುವಕನ ಸಾವಿಗೆ ಜೈಲು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement