ಸಿದ್ದರಾಮಯ್ಯ, ಕುಮಾರಸ್ವಾಮಿ, ಸಾಹಿತಿ ಕುಂವೀ ಸೇರಿ 61 ಜನರಿಗೆ ಕೊಲೆ ಬೆದರಿಕೆ ಪತ್ರ

ಹೊಸಪೇಟೆ(ವಿಜಯನಗರ): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ, ಸಾಹಿತಿ ಸಾಹಿತಿ ಕುಂ. ವೀರಭದ್ರಪ್ಪ ಸೇರಿದಂತೆ 61 ಮಂದಿಗೆ ಕೊಲೆ ಬೆದರಿಕೆ ಪತ್ರ ಬರೆಯಲಾಗಿದೆ.

ಎರಡು ಪುಟಗಳ ಪತ್ರ ಬರೆದಿರುವ ಹೆಸರು ಮತ್ತು ವಿಳಾಸವಿಲ್ಲದ ‘ಸಹಿಷ್ಣು ಹಿಂದೂ’ ಹೆಸರಿನಲ್ಲಿ ’61ಕ್ಕೂ ಹೆಚ್ಚು ಮಂದಿ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಕೊಲೆ ಬೆದರಿಕೆ ಪತ್ರದ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ, ‘ನನಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಕೊಲೆ ಬೆದರಿಕೆ ಪತ್ರ ಬಂದಿದೆ, ಹೆಸರು ವಿಳಾಸ ಇಲ್ಲದೆ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ಹೆಸರುಗಳೂ ಇವೆ ಎಂದು ತಿಳಿಸಿದ್ದಾರೆ. ಪತ್ರದಲ್ಲಿ ‘ಹಿಜಾಬ್, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61ಕ್ಕೂ ಹೆಚ್ಚು ಮಂದಿ ಸಾಹಿತಿಗಳು ರಾಜ್ಯ ಸರಕಾರಕ್ಕೆ ಪತ್ರ ಬರೆದ ಕುರಿತು’ ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement