ರಾಮನವಮಿ ಹಿಂಸಾಚಾರ: ಆಸ್ತಿ ಹಾನಿ ವಸೂಲಿ ಮಾಡಲು ಆರೋಪಿಗಳ ಮನೆಗಳನ್ನು ಕೆಡವಿದ ಮಧ್ಯಪ್ರದೇಶ ಸರ್ಕಾರ ..!

ಭಾನುವಾರ ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯಲ್ಲಿ, ರಾಜ್ಯ ಸರ್ಕಾರವು ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪಿಗಳಿಂದ ಆಸ್ತಿ ಹಾನಿ ಹಿಂಪಡೆಯಲು ಮನೆಗಳನ್ನು ನೆಲಸಮಗೊಳಿಸಿದೆ.
ಸೋಮವಾರ ಛೋಟಿ ಮೋಹನ್ ಟಾಕೀಸ್ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸರ್ಕಾರಿ ಅಧಿಕಾರಿಗಳು ಬುಲ್ಡೋಜರ್‌ಗಳೊಂದಿಗೆ ಅಲ್ಲಿಗೆ ಆಗಮಿಸಿ ಹಿಂಸಾಚಾರ ಎಸಗಿದ ಆರೋಪಿಗಳ ಮನೆಗಳನ್ನು ಕೆಡವಿದರು. ಗಲಭೆಕೋರರ ಸುಮಾರು 50 ಮನೆಗಳನ್ನು ನೆಲಸಮಗೊಳಿಸಲಾಗಿದೆ.

ಇಂದೋರ್ ವಿಭಾಗದ ಆಯುಕ್ತ ಪವನ್ ಶರ್ಮಾ ಮಾತನಾಡಿ, 84 ಜನರನ್ನು ಬಂಧಿಸಲಾಗಿದೆ. ಗಲಭೆಕೋರರನ್ನು ಬಿಡುವುದಿಲ್ಲ. ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ನೀಡಿದ ಕಾರಣಕ್ಕಾಗಿ ಮೂವರು ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಮತ್ತು ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಹೇಳಿದರು. ಈ ವಿಷಯದಲ್ಲಿ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಹೊಂದಿದೆ. ಇದರ ಅಡಿಯಲ್ಲಿ 84 ಜನರನ್ನು ಬಂಧಿಸಲಾಗಿದೆ. ಐಜಿ ರಾಕೇಶ್ ಗುಪ್ತಾ, “ನಮ್ಮ ಪಡೆ ನಿರಂತರವಾಗಿ ತೊಡಗಿಸಿಕೊಂಡಿದೆ ಮತ್ತು ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ” ಎಂದು ಹೇಳಿದರು.

ಪ್ರಮುಖ ಸುದ್ದಿ :-   1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ವಿಷಯ  ಏನು?
ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ, ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಯಿತು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು ಎಂದು ಖರ್ಗೋನ್ ಹೆಚ್ಚುವರಿ ಕಲೆಕ್ಟರ್ ಸುಮರ್ ಸಿಂಗ್ ಮುಜಾಲ್ಡೆ ಹೇಳಿದ್ದಾರೆ.
ಕಲ್ಲು ತೂರಾಟದಿಂದ ಕೆಲವು ವಾಹನಗಳು ಜಖಂಗೊಂಡವು ಮತ್ತು ಇದು ನಂತರ ಮನೆಗಳಿಗೆ ಬೆಂಕಿ ಹಚ್ಚಲು ಕಾರಣವಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘರ್ಷಣೆಯಲ್ಲಿ ಗಾಯಗೊಂಡವರಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಸೇರಿದ್ದಾರೆ.

ಘಟನೆಯ ನಂತರ, ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿಯಂದು ಇಡೀ ಖಾರ್ಗೋನ್ ನಗರದಲ್ಲಿ ಕರ್ಫ್ಯೂ ವಿಧಿಸಲಾಯಿತು. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಹೊರತು ಪಡಿಸಿ ಹೊರಗೆ ಕಾಲಿಡದಂತೆ ನಾಗರಿಕರಿಗೆ ತಿಳಿಸಲಾಗಿದೆ. ಖಾರ್ಗೋನ್‌ನಲ್ಲಿ ನಡೆದ ಕೋಮು ಹಿಂಸಾಚಾರದ ದುಷ್ಕರ್ಮಿಗಳನ್ನು ಗುರುತಿಸಲಾಗಿದೆ ಮತ್ತು ಅವರನ್ನು ಬಿಡಲಾಗುವುದಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ.
ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಉಂಟಾದ ಹಾನಿಯ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಲಾಗುವುದು ಎಂದು ಚೌಹಾಣ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಶಿವಕಾಶಿಯ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement