ಆಗ್ರಾದ ರಾಷ್ಟ್ರೀಯ ನಾಯಕತ್ವ ಶಿಬಿರಕ್ಕೆ ಧಾರವಾಡದ ವಿದ್ಯಾರ್ಥಿ ಆಯ್ಕೆ

ಧಾರವಾಡ: ಉತ್ತರ ಪ್ರದೇಶದ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಆಗ್ರಾದಲ್ಲಿ ಏಪ್ರಿಲ್‌ ೧೨ ರಿಂದ ೧೫ರ ವರೆಗೂ ನಡೆಯುತ್ತಿರುವ ನಾಲ್ಕು ದಿನಗಳ ರಾಷ್ಟ್ರೀಯ ನಾಯಕತ್ವ ಶಿಬಿರದಲ್ಲಿ ಕರ್ನಾಟಕದಿಂದ ಮೂವರು ಯುವಕರು ಭಾಗವಹಿಸುತ್ತಿದ್ದು ಅದರಲ್ಲಿ ಧಾರವಾಡದ ಯುವಕನೂ ಸೇರಿದ್ದಾನೆ.
ಎನ್ ಎಸ್ ಎಸ್ ಸ್ವಯಂ ಸೇವಕ ಸಂಜಯಕುಮಾರ ಯಂಕನಗೌಡ ಬಿರಾದಾರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತ್ತಿದ್ದಾರೆ. ಪ್ರಸ್ತುತ ಇವರು ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದಲ್ಲಿ ಓದುತ್ತಿದ್ದಾರೆ. ಇವರಿಗೆ ೨೦೧೯/೨೦ ನೇ ಸಾಲಿನ ಕರ್ನಾಟಕ ಸರ್ಕಾರ ಕೊಡಮಾಡುವ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಕೊಡಮಾಡುವ ೨೦೧೯/೨೦ ನೇ ಸಾಲಿನ ಪ್ರತಿಷ್ಠಿತ ಡಾ.ಡಿ.ಸಿ.ಪಾವಟೆ ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

3.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ನಿಮ್ಮ ಕಾಮೆಂಟ್ ಬರೆಯಿರಿ

advertisement