ಸಂತೋಷ್ ಪಾಟೀಲ ಸಾವಿನಲ್ಲಿ ಕಾಂಗ್ರೆಸ್ ‘ಬೇನಾಮಿ ಅಧ್ಯಕ್ಷೆ’ಯ ಕೈವಾಡವಿದೆಯೇ : ಬಿಜೆಪಿ ಟ್ವೀಟ್

posted in: ರಾಜ್ಯ | 0

ಬೆಂಗಳೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಆತ್ಮಹತ್ಯೆಗೆ ಬಿಜೆಪಿ ಈಗ ಇದು ಕಾಂಗ್ರೆಸ್ ಪಕ್ಷದ “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಸೃಷ್ಟಿಸಿದ “ಮಹಾಕೈವಾಡವೇ ಎಂದು ಪ್ರಶ್ನಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿಯ ರಾಜ್ಯ ಘಟಕ, ಕೇಂದ್ರದ ನಾಯಕರ, ಮಂತ್ರಿಗಳ, ಅಧಿಕಾರಿಗಳ ಬಳಿಗೆ ತೆರಳಿ ದೂರು ಸಲ್ಲಿಸುವಷ್ಟು ಧೈರ್ಯವಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮೆತ್ತಗಿನ ಮನುಷ್ಯನೇ? ಇದರ ಹಿಂದೆ #40PercentCONgressToolkit ಕೈವಾಡವಿದೆ. ಅರಾಜಕತೆ ಸೃಷ್ಟಿಸಲು ಮುಗ್ಧರನ್ನು ಕಾಂಗ್ರೆಸ್‌ ನಾಯಕರು ಬಳಸಿಕೊಳ್ಳುತ್ತಿದ್ದಾರೆಯೇ? ಎಂದು ಪ್ರಶ್ನಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಅನುಮೋದನೆ ಇಲ್ಲದೆಯೇ ನೂರಕ್ಕೂ ಹೆಚ್ಚು ಕಾಮಗಾರಿ ನಡೆಸಿದ್ದ ಸಂತೋಷ ನಡೆಸಿದ್ದಾರೆ ಎಂಬುದಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಇದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಯಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಅನಧಿಕೃತ ಕಾಮಗಾರಿಯ ಹಿಂದೆ ಕೆಪಿಸಿಸಿಯ “ಅಘೋಷಿತ ಅಧ್ಯಕ್ಷೆಯ” ಪಾತ್ರವೇನು? ಎಂದು ಪ್ರಶ್ನಿಸಿದೆ.

ಸಂತೋಷ ಪಾಟೀಲ್ ಮೂಲತಃ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ. ಈ ಹಿಂದೆ ಮೃತ ಸಂತೋಷ ಪಾಟೀಲ ರಾಹುಲ್ ಗಾಂಧಿ ಸಹಿ ನಕಲು ಮಾಡಿದ್ದು ನಿಜವೇ? ಈ ಕಾರಣಕ್ಕಾಗಿ ಆತನನ್ನು ಕಾಂಗ್ರೆಸ್ಸಿನಿಂದ ಉಚ್ಚಾಟನೆ ಮಾಡಿದ್ದು ಸುಳ್ಳೇ ? ಎಂದು ಕಾಂಗ್ರೆಸ್‌ ಅನ್ನು ಪ್ರಶ್ನಿಸಿರುವ ಬಿಜೆಪಿ, ಆತ ಕಾಂಗ್ರೆಸ್ಸಿನ “ಬೇನಾಮಿ ಅಧ್ಯಕ್ಷರಿಗೆ” ನಿಷ್ಠನಾಗಿದ್ದದ್ದು ಸುಳ್ಳೇ? ಇದು “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಪೋಣಿಸಿರುವ ಷಡ್ಯಂತ್ರವೇ? ಕಾರ್ಯಾದೇಶ ಇಲ್ಲದೇ ಕೆಪಿಸಿಸಿ “ಅಘೋಷಿತ ಅಧ್ಯಕ್ಷೆಯ” ಕ್ಷೇತ್ರದಲ್ಲಿ ಕಾಮಗಾರಿ ನಡೆಸಿದ್ದು ಹೇಗೆ ? ಹೀಗೆ ಸಂತೋಷ ಪ್ರಕರಣ #40PercentCONgressToolkit ಭಾಗ ಎಂಬುದಕ್ಕೆ ಹಲವಾರು ದೃಷ್ಟಾಂತಗಳಿವೆ ಎಂದು ಬಿಜೆಪಿ ಆರೋಪಿಸಿದೆ.

ಇಂದಿನ ಪ್ರಮುಖ ಸುದ್ದಿ :-   ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ಮುನ್ಸೂಚನೆ

40% ಕಮಿಷನ್ ಆರೋಪವು ಕಾಂಗ್ರೆಸ್ ಪಕ್ಷ ಸೃಷ್ಟಿಸಿದ ಬಹುದೊಡ್ಡ ಟೂಲ್ ಕಿಟ್. ಈ ಷಡ್ಯಂತ್ರವನ್ನು ಪೋಷಿಸುವುದಕ್ಕಾಗಿ ಕಾಂಗ್ರೆಸ್ ಖಳನಾಯಕರು ಮಗದೊಂದು ಪ್ರಹಸನ ಹೆಣೆದರೇ? ಸಾವಿನ ರಾಜಕಾರಣಕ್ಕೆ ಕಾಂಗ್ರೆಸ್ ಮುನ್ನುಡಿ ಬರೆಯುತ್ತಿದೆಯೇ? ಎಂದು ಬಿಜೆಪಿ ಆರೋಪಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement