ಎರಡು ಕಾರ್​ಗಳ ಮಧ್ಯೆ ಡಿಕ್ಕಿ; ಗಾಯಾಳುಗಳನ್ನು ವಿಚಾರಿಸಿ ಆಸ್ಪತ್ರೆಗೆ ಸಾಗಿಸಲು ಕಾರುನೀಡಿ ಬೈಕಿನಲ್ಲಿ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ

ಹೊಸಪೇಟೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕಾರು ಸವಾರರಿಗೆ ಸಹಾಯ ಹಸ್ತ ನೀಡಿದ್ದಾರೆ.

ಹೊಸಪೇಟೆಯಲ್ಲಿ ಇಂದಿನಿಂದ (ಶನಿವಾರದಿಂದ) ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ಹೊಸಪೇಟೆ ತಾಲೂಕಿನ ಪಿ.ಕೆ ಹಳ್ಳಿಯ ಬಳಿ ಎರಡು ಕಾರ್​ಗಳ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಇದನ್ನು ನೋಡಿ ಕರಂದ್ಲಾಜೆ ನೆರವಿಗೆ ಧಾವಿಸಿದ್ದಾರೆ. ಅಪಘಾತಕ್ಕೀಡಾದವರ ಆರೋಗ್ಯ ವಿಚಾರಿಸಿ ಗಾಯಗೊಂಡ ಅವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ಅಲ್ಲದೆ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ತಮ್ಮ ವಾಹನವನ್ನು ನೀಡಿ, ಕಾರ್ಯಕಾರಿಣಿ ನಡೆಯುವ ಸ್ಥಳಕ್ಕೆ, ಸುಮಾರು 6-7 ಕಿಮೀ ದೂರ ಬೈಕಿನ ಮೂಲಕ ತೆರಳಿದರು. ಯಾರಿಗೆ ಅವಶ್ಯಕತೆಯಿದೆಯೋ ಅವರಿಗೆ ತಮ್ಮ ಕಾರು ನೀಡಿ ಬೈಕಿಗೆ ಸಮಾರಂಭದ ಸ್ಥಳಕ್ಕೆ ತೆರಳಿದ ಕೇಂದ್ರ ಸಚಿವರ ಈ ನಡೆಗೆ ಸ್ಥಳೀಯರು ಪ್ರಶಂಸಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement