ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ನೀಡಲಿ, ಆ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ದಿಂಗಾಲೇಶ್ವರ ಸ್ವಾಮೀಜಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಜ್ಞಾನಿ ಸ್ವಾಮೀಜಿ, ದೊಡ್ಡ ತಪಸ್ವಿಗಳಾಗಿದ್ದಾರೆ. ಸ್ವಾಮೀಜಿಗಳಿಗೆ ಒಳ್ಳೆಯ ಹಿನ್ನೆಲೆ ಇದೆ. ಅವರು ಎಲ್ಲಿ, ಯಾರಿಗೆ, ಎಷ್ಟು ಪರ್ಸೆಂಟೇಜ್ ಕೊಟ್ಟಿದ್ದಾರೆ ಎಂಬ ಬಗ್ಗೆ ದಾಖಲೆ ನೀಡಿದರೆ ಅದರ ಬಗ್ಗೆ ನಾವು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದು ಹೇಳಿದರು.
ಮಠಗಳಿಗೆ ಅನುದಾನ ಬಿಡುಗಡೆಗೂ ಶೇ. ೩೦ರಷ್ಟು ಕಮಿಷನ್ ನೀಡಬೇಕು” ಎಂದು ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ