ಮಲ್ಪೆ: ಸೆಲ್ಫಿ ತೆಗೆಯುಲು ಹೋಗಿ ನೀರುಪಾಲಾದ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು

ಉಡುಪಿ: ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯುಲು ಹೋಗಿ ನೀರುಪಾಲಾದ ಘಟನೆ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನಿಂದ 68 ವಿದ್ಯಾರ್ಥಿಗಳು ಪ್ರವಾಸ ಬಂದಿದ್ದು, ಲೈಫ್ ಗಾರ್ಡ್ ಸಿಬ್ಬಂದಿ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋಗಿ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ ಎಂದು ಹೇಳಲಾಗಿದೆ.

ನೀರುಪಾಲಾದ ವಿದ್ಯಾರ್ಥಿಗಳನ್ನು ಹಾವೇರಿಯ ಸತೀಶ( 21) ಮತ್ತು ಬಾಗಲಕೋಟೆಯ ಸತೀಶ ಎಸ್. ಕಲ್ಯಾಣಶೆಟ್ಟಿ (21) ಎಂದು ಗುರುತಿಸಲಾಗಿದೆ. ಲೈಫ್ ಗಾರ್ಡ್ ಸಿಬ್ಬಂದಿ ಓರ್ವನ ಶವ ಮೇಲಕ್ಕೆತ್ತಿದ್ದು, ಮತ್ತೊಬ್ಬ ಯುವಕನಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಏಪ್ರಿಲ್ 7ರಂದು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆ ಬಂದಿದ್ದಾಗ ಮೂವರು ನೀರುಪಾಲಾದ ಘಟನೆ ನಡೆದಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement