ಹುಣಸೂರು: ಭೀಕರ ಅಪಘಾತ 6 ಮಂದಿ ಸ್ಥಳದಲ್ಲೇ ಸಾವು

ಮೈಸೂರು: ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್‌ ಬೆಟ್ಟ ಬಳಿ ಬುಧವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ.
ಹುಣಸೂರು ಕಡೆಯಿಂದ ಪಾಲಿಬೆಟ್ಟ ಗ್ರಾಮಕ್ಕೆ ತೆರಳುತ್ತಿದ್ದ ಬುಲೆರೋ ವಾಹನ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತಪಟ್ಟ 6 ಮಂದಿಯೂ ಪಾಲಿಬೆಟ್ಟ ಗ್ರಾಮದವರಾಗಿದ್ದು, ಬಂಧುಗಳ ಆಕ್ರಂದನ ಮುಗಿಲುಮುಟ್ಟಿತ್ತು.
ದುರ್ಘಟನೆಯಲ್ಲಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement